
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಒಮ್ಮತದ ಪ್ರಧಾನಿ ಅಭ್ಯರ್ಥಿ ಕೊರತೆಯನ್ನು ಪ್ರತಿಪಕ್ಷಗಳ ಪಾಳೆಯ ಎದುರಿ ಸುತ್ತಿರುವಾಗಲೇ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆಯೂ ಆಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲು ತಾವು ಹಿಂಜರಿಯುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಘೋಷಿಸಿದ್ದಾರೆ.
ತನ್ಮೂಲಕ ಇದೇ ಮೊದಲ ಬಾರಿಗೆ ಬೇರೊಂದು ಪಕ್ಷದ ಮುಖೇನ ಮಮತಾ ಬ್ಯಾನರ್ಜಿ ಅವರ ಹೆಸರು ಪ್ರಧಾನಿ ರೇಸ್ಗೆ ನಾಮ ನಿರ್ದೇಶನ’ವಾದಂತಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜತೆಗೂಡಿ ಸರ್ಕಾರ ನಡೆಸುತ್ತಿರುವ ಜೆಡಿಎಸ್ ಪಕ್ಷದ ಮುಖ್ಯಸ್ಥರಾಗಿರುವ ಎಚ್. ಡಿ. ದೇವೇಗೌಡರು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಬದಲಿಗೆ ಮಮತಾ ಪರ ಬ್ಯಾಟ್ ಬೀಸಿರು ವುದು ಗಮನಾರ್ಹವಾಗಿದೆ.
ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನ ಮಂತ್ರಿ ಹುದ್ದೆಗೆ ಬಿಂಬಿಸಿದರೆ ಸ್ವಾಗತಿಸುತ್ತೇನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.