'ಮಮತಾ ಬ್ಯಾನರ್ಜಿ ಹಿರಣ್ಯ ಕಶಿಪು ವಂಶದವರು'

Published : Jun 03, 2019, 09:54 AM IST
'ಮಮತಾ ಬ್ಯಾನರ್ಜಿ ಹಿರಣ್ಯ ಕಶಿಪು ವಂಶದವರು'

ಸಾರಾಂಶ

ಮಮತಾ ಬ್ಯಾನರ್ಜಿ ಹಿರಣ್ಯಕಶಿಪು ರಾಕ್ಷಸ ವಂಶದವರು ಎಂದು ಬಿಜೆಪಿ ನಾಯಕ ಸಾಕ್ಷಿ ಮಹಾರಾಜ್ ವಿವಾದಿತ ಹೇಳಿಕೆ ನೀಡಿದ್ದಾರೆ. 

ನವದೆಹಲಿ: ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಜೈಲಿಗಟ್ಟಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಕ್ಷಸ ಹಿರಣ್ಯ ಕಶಿಪು ವಂಶದವರು ಎಂದು ಉತ್ತರ ಪ್ರದೇಶದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ‘ಹಿರಣ್ಯಕಶಿಪು ವಿಷ್ಣುವಿನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದ ತನ್ನ ಮಗನಾದ ಪ್ರಹ್ಲಾದ ನಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಾನೆ. 

ಅಲ್ಲದೆ, ಆತನನ್ನು ಸೆರೆವಾಸದಲ್ಲಿಡುತ್ತಾನೆ. ಹಿರಣ್ಯಕಶಿಪು ರೀತಿಯಲ್ಲೇ ಮಮತಾ ಅವರು ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಜೈಲಿಗಟ್ಟುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ
ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: ಡಿ.ಕೆ.ಶಿವಕುಮಾರ್