ಮೋದಿ ಕರೆ ಮಾಡಿದರೂ ಸಿಗ್ಲಿಲ್ಲ ದೀದಿ!

Published : May 06, 2019, 09:38 AM IST
ಮೋದಿ ಕರೆ ಮಾಡಿದರೂ ಸಿಗ್ಲಿಲ್ಲ ದೀದಿ!

ಸಾರಾಂಶ

ಮೋದಿ ಕರೆ ಮಾಡಿದರೂ ಚಂಡಮಾರುತ ಮಾಹಿತಿ ನೀಡಲು ಸಿಗದ ಮಮತಾ| ಟಿಎಂಸಿ ಆರೋಪಕ್ಕೆ ಸ್ಪಷ್ಟನೆ

ನವದೆಹಲಿ[ಮೇ.06]: ಫೋನಿ ಚಂಡಮಾರುತದ ಕುರಿತು ವಾಸ್ತವತೆ ತಿಳಿಯಲು ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಜೊತೆ ಮಾತುಕತೆ ನಡೆಸುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್‌ ಆರೋಪಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಫೋನಿ ಕುರಿತು ಚರ್ಚಿಸಲು ಸಿಎಂ ಬ್ಯಾನರ್ಜಿ ಅವರಿಗೆ 2 ಬಾರಿ ಕರೆ ಮಾಡಿದ್ದರು.

ಆದರೆ ಮೋದಿ ಕರೆಯನ್ನು ಬ್ಯಾನರ್ಜಿ ಅವರೇ ಕಡೆಗಣಿಸಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ, ಕೊನೆಗೆ ಮೋದಿ ಅವರು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ ನಾಥ್‌ ತ್ರಿಪಾಠಿ ಅವರಿಗೆ ಕರೆ ಮಾಡಿ ಫನಿ ಚಂಡಮಾರುತದ ತೀವ್ರತೆ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಅಧಿಕಾರಿಯೊಬ್ಬರು, ‘ಬ್ಯಾನರ್ಜಿ ಅವರ ಜೊತೆ ಸಂಪರ್ಕ ಸಾಧಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಿಬ್ಬಂದಿ ಶನಿವಾರ 2 ಬಾರಿ ಕರೆ ಮಾಡಿದ್ದರು. ಈ ಸಂದರ್ಭದಲ್ಲಿ ಸಿಎಂ ಬ್ಯಾನರ್ಜಿ ಅವರು ಕಾರ್ಯ ನಿರತರಾಗಿದ್ದಾರೆ.

ಆ ನಂತರ ವಾಪಸ್‌ ಕರೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಅಲ್ಲದೆ, ಮತ್ತೊಂದು ಬಾರಿ ಸಿಎಂ ಅವರು ಪ್ರವಾಸ ಕೈಗೊಂಡಿದ್ದಾರೆ,’ ಎಂದು ತಿಳಿಸಲಾಗಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

1971ರ ಯುದ್ಧದಲ್ಲಿ ಭಾರತ ಮುಳುಗಿಸಿದ್ದ ಪಿಎನ್‌ಎಸ್‌ ಘಾಜಿ ಸಬ್‌ಮರೀನ್‌ ನೌಕೆ ಪುನಃ ಪಡೆದ ಪಾಕಿಸ್ತಾನ
ರಾಮನಗರದಲ್ಲಿದೆ ವಾರಸುದಾರರಿಲ್ಲದ 48.69 ಕೋಟಿ ರು! ಹಣ ವಾಪಸ್ ಹಿಂದಿರುಗಿಸಲು ನಿಮ್ಮ ಹಣ-ನಿಮ್ಮ ಹಕ್ಕು ಅಭಿಯಾನ