ಆಧಾರ್ ಕಾರ್ಡ್ ಕಡ್ಡಾಯ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

Published : Oct 27, 2017, 06:19 PM ISTUpdated : Apr 11, 2018, 12:45 PM IST
ಆಧಾರ್ ಕಾರ್ಡ್ ಕಡ್ಡಾಯ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಸಾರಾಂಶ

ಸಾಮಾಜಿಕ ಅಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ  ನಡೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

 ನವದೆಹಲಿ (ಅ.27): ಸಾಮಾಜಿಕ ಅಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಏನೇ ಆಗಲಿ, ನಾನು ಮೊಬೈಲ್ ಸಂಖ್ಯೆಯೊಂದಿಗೆ ಆಧಾರನ್ನು ಲಿಂಕ್ ಮಾಡಲ್ಲ; ಸಂಪರ್ಕ ಸ್ಥಗಿತಗೊಳಿಸಿದರೂ ಪರ್ವಾಗಿಲ್ಲ,’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಮುಂದುವರಿದು, ಎಲ್ಲರೂ ಕೂಡಾ ಇದೇ ರೀತಿ (ಲಿಂಕ್ ಮಾಡಿಸದೇ) ಆಧಾರ್ ಕಡ್ಡಾಯಗೊಳಿಸುವಿಕೆಯ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ಕರೆಕೊಟ್ಟಿದ್ದಾರೆ. ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡುವುದು ಖಾಸಗಿತನ ಹಕ್ಕಿನ ಉಲ್ಲಂಘನೆಯಾಗಿದೆ. ಇದು ಮುಂದುವರೆದರೆ, ಪತಿ-ಪತ್ನಿಯ ಖಾಸಗಿ ಸಂಭಾಷಣೆಗಳು ಕೂಡಾ ಸಾರ್ವಜನಿಕವಾಗಬಹುದು, ಎಂದು ದೀದಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್