ಬಿಜೆಪಿ ಶಾಕ್‌ : ಸಿಎಂ ಸ್ಥಾನಕ್ಕೆ ದೀದಿ ರಾಜೀನಾಮೆ?

Published : May 26, 2019, 08:07 AM IST
ಬಿಜೆಪಿ ಶಾಕ್‌ : ಸಿಎಂ ಸ್ಥಾನಕ್ಕೆ ದೀದಿ ರಾಜೀನಾಮೆ?

ಸಾರಾಂಶ

ದೇಶದಲ್ಲಿ ಬಿಜೆಪಿ ಭಾರೀ ಜಯಭೇರಿ ಭಾರಿಸಿದೆ. ಹಲವು ರಾಜ್ಯಗಳಲ್ಲಿ  ಸ್ಟ್ರಾಂಗ್ ಪಕ್ಷಗಳಿಗೆ ಇದು ನುಂಗಲಾರದ ತುತ್ತಾಗಿದೆ. ಇತ್ತ ಪಶ್ಚಿಮ ಬಂಗಾಳದಲ್ಲಿ ದೀದಿ  ರಾಜೀನಾಮೆ ನೀಡಲು ಮುಂದಾಗಿದ್ದಾರೆ. 

ಕೋಲ್ಕತಾ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಜಯ ಅತ್ತ ಕಾಂಗ್ರೆಸ್‌ ನಾಯಕತ್ವದಲ್ಲಿ ಕಂಪನ ಮೂಡಿಸಿದ್ದರೆ, ಇತ್ತ ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿಯಲ್ಲೂ ಭಾರೀ ತಲ್ಲಣಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಪಕ್ಷದ ಅವಮಾನಕಾರ ಸೋಲಿಗೆ ಹೊಣೆ ಹೊತ್ತು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಚುನಾವಣೆ ಫಲಿತಾಂಶದ ಬಳಿಕ ನಡೆಸಲಾದ ಪಕ್ಷದ ಮೊದಲ ಸಭೆಯಲ್ಲಿ ಮಮತಾ ಬ್ಯಾನರ್ಜಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದರು. ‘ಪಕ್ಷದ ಆಂತರಿಕ ಸಭೆಯಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದೆ. ನನಗೆ ಕುರ್ಚಿ ಮುಖ್ಯವಲ್ಲ. ನಾನು ರಾಜೀನಾಮೆ ನೀಡಲು ಬಯಸಿದ್ದೆ. ಈ ಹಿಂದೆಯೂ ನಾನು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ನಾನು ನನ್ನ ಪಕ್ಷದ ಮುಖಂಡರನ್ನು ಒಪ್ಪಿಸಲು ಯತ್ನಿಸಿದೆ. ಆದರೆ, ಅವರು ಒಪ್ಪಿಕೊಳ್ಳಲಿಲ್ಲ. ಕುರ್ಚಿಗೆ ನನ್ನ ಅಗತ್ಯವಿದೆ. ನನಗೆ ಕುರ್ಚಿಯ ಅಗತ್ಯವಿಲ್ಲ. ಚುನಾವಣಾ ಆಯೋಗದ ಕಾರಣದಿಂದಾಗಿ ನಾನು ಕಳೆದ ಆರು ತಿಂಗಳಿನಿಂದ ಯಾವುದೇ ಅಧಿಕಾರ ಇಲ್ಲದ ಮುಖ್ಯಮಂತ್ರಿ ಆಗಿದ್ದೆ’ ಎಂದು ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧವೂ ಹರಿಹಾಯ್ದ ಮಮತಾ, ಈ ಚುನಾವಣೆಯಲ್ಲಿ ಕೇಂದ್ರೀಯ ಪಡೆಗಳು ನಮ್ಮ ವಿರುದ್ಧ ಕೆಲಸ ಮಾಡಿದವು. ಕೋಮುವಾದಿ ಅಜೆಂಡಾದಲ್ಲಿ ಬಿಜೆಪಿ ಜಯಿಸಿತು. ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡಿತು. ಬಿಜೆಪಿ ಧಾರ್ಮಿಕ ಧ್ರುವೀಕರಣದಲ್ಲಿ ತೊಡಗಿಕೊಂಡಿದೆ ಎಂದ ಆರೋಪಿಸಿದರು.

ವಿದೇಶಿ ಶಕ್ತಿಗಳು: ಬಿಜೆಪಿಯ ದಿಗ್ವಿಜಯ ಸಂಶಯಾತೀತ ಅಲ್ಲ. ಹಲವು ರಾಜ್ಯಗಳಲ್ಲಿ ಪ್ರತಿಪಕ್ಷಗಳು ನಾಮಾವಶೇಷ ಆಗಿದ್ದು ಹೇಗೆಂಬುದು ಅಚ್ಚರಿ. ಏನೋ ಸೆಟ್ಟಿಂಗ್‌ ಆಗಿದೆ. ವಿದೇಶಿ ಶಕ್ತಿಗಳು ಕೆಲಸ ಮಾಡಿರಬಹುದು ಎಂದು ಮಮತಾ ಅನುಮಾನ ವ್ಯಕ್ತಪಡಿಸಿದರು.

ಕಳೆದ ಬಾರಿ ರಾಜ್ಯದ 42 ಸ್ಥಾನಗಳ ಪೈಕಿ 2 ರಲ್ಲಿ ಜಯ ಸಾಧಿಸಿದ್ದ ಬಿಜೆಪಿ ಈ ಬಾರಿ 18 ಸ್ಥಾನ ಗೆದ್ದುಕೊಂಡಿದೆ. ಇನ್ನು ಕಳೆದ ಬಾರಿ 32 ಸ್ಥಾನ ಗೆದ್ದಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

ಪಕ್ಷದ ಆಂತರಿಕ ಸಭೆಯಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದೆ. ನನಗೆ ಕುರ್ಚಿ ಮುಖ್ಯವಲ್ಲ. ನಾನು ರಾಜೀನಾಮೆ ನೀಡಲು ಬಯಸಿದ್ದೆ. ಈ ಹಿಂದೆಯೂ ನಾನು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ನಾನು ನನ್ನ ಪಕ್ಷದ ಮುಖಂಡರನ್ನು ಒಪ್ಪಿಸಲು ಯತ್ನಿಸಿದೆ. ಆದರೆ, ಅವರು ಒಪ್ಪಿಕೊಳ್ಳಲಿಲ್ಲ.

- ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ