
ನವದೆಹಲಿ (ಡಿ. 27): ನೋಟು ಅಮಾನ್ಯ ಘೋಷಣೆಯಾಗಿ 50 ದಿನದೊಳಗಾಗಿ ಪರಿಸ್ಥಿತಿ ಸುಧಾರಿಸದಿದ್ದರೆ ರಾಜಿನಾಮೆ ನೀಡುತ್ತೇನೆಂದು ಪ್ರಧಾನಿ ಮೋದಿ ಮಾತು ನೀಡಿದ್ದರು. ಅದರಂತೆ ಮೋದಿ ರಾಜಿನಾಮೆ ನೀಡಬೇಕೆಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಗರಿಷ್ಟ ಮುಖಬೆಲೆಯ ನೋಟು ನಿಷೇಧ ಮಾಡುವ ಮುನ್ನ ಸಂಸತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಮಮತಾ ನೇರವಾಗಿ ಮೋದಿಯವರ ಮೇಲೆ ಆರೋಪಿಸಿದ್ದಾರೆ.
50 ದಿನಗಳಲ್ಲಿ ಪರಿಸ್ಥಿತಿ ತಹಬದಿಗೆ ಬರದಿದ್ದರೆ ನೀವು ರಾಜಿನಾಮೆ ನೀಡುವಿರಾ? ದೇಶವನ್ನು 20 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಿ ನೀವು ಮಾಡಿದ್ದೇನು? ಎಂದು ಮೋದಿಯವರಿಗೆ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.