ಬಿಜೆಪಿ - ಮಮತಾ ಮಹಾಸಂಗ್ರಾಮ

Published : Aug 02, 2018, 11:12 AM IST
ಬಿಜೆಪಿ - ಮಮತಾ ಮಹಾಸಂಗ್ರಾಮ

ಸಾರಾಂಶ

ಎನ್ ಆರ್‌ಸಿಯಿಂದಾಗಿ ಬಂಗಾಳಿಗಳು ಹಾಗೂ ಬಾಂಗ್ಲಾದೇಶೀಗರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ದಿಲ್ಲಿಯಲ್ಲಿ ವಿವಿಧ ಪ್ರತಿಪಕ್ಷ ಮುಖಂಡರನ್ನು ಭೇಟಿಯಾಗಿ ಬೆಂಬಲ ಕ್ರೋಡೀಕರಿಸಿದ್ದಾರೆ.

ಕೋಲ್ಕತಾ/ನವದೆಹಲಿ: ಅಸ್ಸಾಂನಲ್ಲಿ ಅಕ್ರಮ ಬಾಂಗ್ಲಾದೇಶೀ ವಲಸಿಗರನ್ನು ಗುರುತಿಸಲು ನಡೆಸಲಾಗಿದ್ದ ರಾಷ್ಟ್ರೀಯ ನಾಗರಿಕ ನೋಂದಣಿ ಗಣತಿಯ ಕುರಿತು ಬಿಜೆಪಿ - ತೃಣಮೂಲ ಕಾಂಗ್ರೆಸ್ ನಡುವೆ ‘ಮಹಾಸಂಗ್ರಾಮ’ದ ಸಾಧ್ಯತೆ ಇದೆ. ಎನ್ ಆರ್‌ಸಿಯಿಂದಾಗಿ ಬಂಗಾಳಿಗಳು ಹಾಗೂ ಬಾಂಗ್ಲಾದೇಶೀಗರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ದಿಲ್ಲಿಯಲ್ಲಿ ವಿವಿಧ ಪ್ರತಿಪಕ್ಷ ಮುಖಂಡರನ್ನು ಭೇಟಿಯಾಗಿ ಬೆಂಬಲ ಕ್ರೋಡೀಕರಿಸಿದ್ದಾರೆ.

ಇನ್ನೊಂದು ಕಡೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್ 11 ಕ್ಕೆ ಕೋಲ್ಕತಾಗೆ ಆಗಮಿಸಲಿದ್ದು, ಅಕ್ರಮ ಬಾಂಗ್ಲಾ ದೇಶೀಯರನ್ನು ದೇಶದಿಂದ ಹೊರಹಾಕುವ ಬಗ್ಗೆ ಹಾಗೂ ಅಸ್ಸಾಂನಲ್ಲಿ ನಡೆದ ಎನ್‌ಆರ್‌ಸಿ ಗಣತಿಯು ಪ.ಬಂಗಾಳದಲ್ಲೂ ನಡೆಯಲಿ ಎಂದು ಒತ್ತಾಯಿಸುವ ಸಾಧ್ಯತೆ ಇದೆ. 

ಈ ನಡುವೆ ಪ.ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹಾಗೂ ರಾಜ್ಯ  ಬಿಜೆಪಿ ಪ್ರಭಾರಿ ಕೈಲಾಶ್ ವಿಜಯವರ್ಗೀಯ ಮಾತನಾಡಿ, ‘ಬಿಜೆಪಿ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ಇಲ್ಲೂ ಎನ್‌ಆರ್‌ಸಿ ಕೈಗೊಳ್ಳಲಿದೆ. ರಾಜ್ಯದಲ್ಲಿ 1 ಕೋಟಿ ಅಕ್ರಮ ಬಾಂಗ್ಲಾದೇಶೀಯರು ಇರುವ ವರ್ತಮಾನ ಬಂದಿದೆ’ ಎಂದು ಹೇಳಿದರು.

ಬೆಂಬಲ ಕ್ರೋಡೀಕರಿಸಿದ ದೀದಿ: ಈ ನಡುವೆ, ಎನ್‌ಆರ್ ಸಿಯಿಂದ ಅಸ್ಸಾಂನಲ್ಲಿನ ಬಂಗಾಳಿಗಳು ಹಾಗೂ ಬಾಂಗ್ಲಾದೇಶೀಯರಿಗೆ ಅನ್ಯಾಯವಾಗಲಿದೆ ಎಂದು ಮನವರಿಕೆ ಮಾಡಿ ಬೆಂಬಲ ಕ್ರೋಡೀಕರಿಸಲು ಮಮತಾ ದಿಲ್ಲಿಯಲ್ಲಿ ವಿವಿಧ ಮುಖಂಡರನ್ನು ಭೇಟಿಯಾದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಮಮತಾ ಮಾತುಕತೆ ನಡೆಸಿದರು. ಮಮತಾರ ಈ ಹೋರಾಟಕ್ಕೆ ಗೌಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಹಾಗೂ ಬಿಜೆಪಿಯ ಅತೃಪ್ತ ಮುಖಂಡರಾದ ಶತ್ರುಘ್ನ ಸಿನ್ಹಾ, ಕೀರ್ತಿ ಆಜಾದ್ ಹಾಗೂ ಯಶವಂತ ಸಿನ್ಹಾ ಅವರನ್ನೂ ಮಮತಾ ಭೇಟಿ ಮಾಡಿದ್ದು ನಾನಾ ಊಹಾಪೋಹಕ್ಕೆ ಕಾರಣವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!