ಬಿಜೆಪಿ ಬ್ಲಾಕ್ ಅಧ್ಯಕ್ಷನಂತೆ ರಾಜ್ಯಪಾಲರ ವರ್ತನೆ: ಮಮತಾ ಕಿಡಿ

Published : Jul 04, 2017, 08:46 PM ISTUpdated : Apr 11, 2018, 01:07 PM IST
ಬಿಜೆಪಿ ಬ್ಲಾಕ್ ಅಧ್ಯಕ್ಷನಂತೆ ರಾಜ್ಯಪಾಲರ ವರ್ತನೆ: ಮಮತಾ ಕಿಡಿ

ಸಾರಾಂಶ

ರಾಜ್ಯಪಾಲ ಕೇಸರ್ ನಾಥ್ ತ್ರಿಪಾಠಿ ತನ್ನನ್ನು ನಿಂದಿಸಿ, ಬೆದರಿಕೆ ಹಾಕಿದ್ದಾರೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೊಪಿಸಿದ್ದಾರೆ. ಆದರೆ ರಾಜಭವನವು ಈ ಆರೋಪಗಳನ್ನು ಅಲ್ಲಗಳೆದಿದೆ.

ಕೋಲ್ಕತ್ತಾ (ಜು.04): ರಾಜ್ಯಪಾಲ ಕೇಸರ್ ನಾಥ್ ತ್ರಿಪಾಠಿ ತನ್ನನ್ನು ನಿಂದಿಸಿ, ಬೆದರಿಕೆ ಹಾಕಿದ್ದಾರೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೊಪಿಸಿದ್ದಾರೆ. ಆದರೆ ರಾಜಭವನವು ಈ ಆರೋಪಗಳನ್ನು ಅಲ್ಲಗಳೆದಿದೆ.

ಇವತ್ತು ರಾಜ್ಯಪಾಲರು ನನ್ನನ್ನು ಬೆದರಿಕೆ ಹಾಕಿದ್ದಾರೆ ಹಾಗೂ ನಿಂದಿದಿ ಅವಮಾನ ಮಾಡಿದ್ದಾರೆ. ನಾನು ಚುನಾಯಿತ ಪ್ರತಿನಿಧಿ, ಅವರು ನೇಮಿಸಲ್ಪಟ್ಟವರು. ನೀವು ಈ ರೀತಿ ಮಾತನಾಡುವಂತಿಲ್ಲವೆಂದು ನಾನವರಿಗೆ ಹೇಳಿದ್ದೇನೆ, ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ರಾಜ್ಯಪಾಲರು ಬಿಜೆಪಿಯ ಬ್ಲಾಕ್ ಅಧ್ಯಕ್ಷರಂತೆ ವರ್ತಿಸುತ್ತಿದದ್ದಾರೆ, ಎಂದು ಮಮತಾ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಆರೋಪಗಳನ್ನು ನಿರಾಕರಿಸಿರುವ ರಾಜಭವನವು, ರಾಜ್ಯಪಾಲರು  ಯಾವುದೇ ರೀತಿಯ ಆಕ್ಷೇಪಕಾರಿ ವರ್ತನೆ ತೋರಿಲ್ಲ, ರಾಜ್ಯದಲ್ಲಿ ಶಾಂತಿ, ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡುವಂತೆ ಮುಖ್ಯಮಂತ್ರಿಗೆ ತಾಕೀತು ಮಾಡಿದ್ದಾರೆ, ಎಂದು ಹೇಳಿದೆ.

ಬದುರಿಯಾ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಭಧಿಸಿ ಮಾತನಾಡಲು ಇಂದು ರಾಜ್ಯಪಾಲರು ಮಮತಾ ಬ್ಯಾನರ್ಜಿಯನ್ನು ರಾಜಭವನಕ್ಕೆ ಕರೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?