
ನವದೆಹಲಿ (ನ.17): ದೊಡ್ಡ ಮುಖಬೆಲೆಯ ನೋಟುಗಳ ಅಪಮೌಲ್ಯೀಕರಣದಿಂದ ಕೇಂದ್ರ ಸರ್ಕಾರ ಜನರ ಜೀವ ಹಿಂಡುತ್ತಿದ್ದು, ಈ ಕೂಡಲೇ ನಿರ್ಧಾರ ವಾಪಸು ಪಡೆಯಬೇಕು ಎಂದು ಆಗ್ರಹಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದೂ ಕೂಡ ದೆಹಲಿಯಲ್ಲಿ ಪ್ರತಿಭಟನ ನಡೆಯಿತು.
ಈ ವೇಳೆ ಮಾತನಾಡಿದ ದೀದಿ, ಪ್ರಧಾನಿ ಮೋದಿ ದೇಶವನ್ನು ಮಾರಾಟ ಮಾಡಲು ಹೊರಟ್ಟಿದ್ದೀರಾ?, ನಾವು ದಿನನಿತ್ಯ ಎಟಿಎಂ ತಿನ್ನೋಕಾಗುತ್ತಾ.? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೂರು ದಿನಗಳಲ್ಲಿ ನೋಟ್ ನಿಷೇಧ ಹಿಂಪಡೆಯಲಿ, ಇಲ್ಲವಾದರೆ ಹೋರಾಟ ಎದುರಿಸಲು ಸಿದ್ಧರಾಗಿ ಎಂದು ಮಮತಾ ಬ್ಯಾನರ್ಜಿ ಸವಾಲೊಡಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್, ಕಪ್ಪು ಹಣದ ಹೆಸರಲ್ಲಿ ಕೇಂದ್ರದ ಭ್ರಷ್ಟಾಚಾರ ನಡೆಸುತ್ತಿದೆ. ಮೋದಿ ನಡೆ ಭ್ರಷ್ಠಾಚಾರದ ವಿರುದ್ಧವಾಗಿಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.