
ನವದೆಹಲಿ (ಫೆ.01): ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಿದ ಬಜೆಟನ್ನು ತೃಣಮೂಲ ಕಾಂಗ್ರೆಸ್ ವರಿಷ್ಟೆ ಮಮತಾ ಬ್ಯಾನರ್ಜಿ ಕಟುವಾಗಿ ಖಂಡಿಸಿದ್ದಾರೆ.
ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಕೇವಲ ಅಂಕಿ-ಸಂಖ್ಯೆಗಳ ಜೊತೆ ಆಟವಾಡುತ್ತಿದ್ದಾರೆ. ನೋಟು ನಿಷೇಧದ ನಂತರ ಅಂಕಿ-ಅಂಶಗಳ ಮಾಹಿತಿಯನ್ನು ಬಹಿರಂಗಪಡಿಸಬಹುದಿತ್ತು ಎಂದು ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಹುನಿರೀಕ್ಷಿತ ಬಜೆಟ್ 2017 ವಿವಾದಾತ್ಮಕವಾದುದು. ಇದೊಂದು ಆಧಾರರಹಿತ, ಉಪಯೋಗಕ್ಕೆ ಬಾರದ, ಮುನ್ನೋಟವಿಲ್ಲದ್ದಾಗಿದೆ. ತೆರಿಗೆ ಪಾವತಿದಾರರಿಗೆ ರಿಲೀಫ್ ನೀಡಿದ್ದರೂ ಸಹ ವಿತ್ ಡ್ರಾ ಮಿತಿಯಲ್ಲಿ ಮಾತ್ರ ನಿರ್ಬಂಧವಿದೆ. ಕೂಡಲೇ ಈ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಿ ಎಂದು ದೀದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.