
ಚಿತ್ತೂರು(ಆಂದ್ರಪ್ರದೇಶ): ಹೆಂಡತಿಯೊಂದಿಗೆ ಜಗಳವಾಡಿದ ಪಾಪಿ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಕೊಂದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಾಲಗಂಗನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಪುನಿತ್(6), ಸಂಜಯ್ (3), ರಾಹುಲ್ (10) ಮೃತ ದುರ್ದೈವಿಗಳು. ವೆಂಕಟೇಶ್ ಮಕ್ಕಳನ್ನು ಕೊಂದ ಕ್ರೂರಿ. ನಿನ್ನೆ ರಾತ್ರಿ 2ನೇ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ. ಗಲಾಟೆ ನಂತರ ಮೂವರು ಕಂದಮ್ಮಗಳನ್ನು ಹತ್ತಿರದ ನೀವಾ ನದಿಗೆ ಎಸೆದು ಪರಾರಿಯಾಗಿದ್ದಾನೆ.ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಗಂಗಾಧರ ನೆಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಚಿತ್ತೂರು ಜಿಲ್ಲಾ ಎಸ್ ಪಿ ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ನದಿಯಲ್ಲಿನ ಮೂವರು ಮಕ್ಕಳ ಮೃತ ದೆಹಗಳು ಹೊರಕ್ಕೆ ತೆಗೆಯಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.