
ಹುಬ್ಬಳ್ಳಿ (ಜ.08): ಹುಬ್ಬಳ್ಳಿಯಲ್ಲಿ ತಲ್ವಾರ್ ಹಿಡಿದು ತಿರುಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಆನಂದ್ ನಗರದಲ್ಲಿ ರಾತ್ರೋ ರಾತ್ರಿ ತಲ್ವಾರ್ ಹಿಡಿದುಕೊಂಡು ಬೈಕ್’ನಲ್ಲಿ ತಿರುಗುತ್ತಿದ್ದ ಎನ್ನಲಾಗಿದೆ. ಈತನ ವರ್ತನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಬಳಿಕ ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಈತನನ್ನು ಬಂಧಿಸಿದ್ದಾರೆ. ಅಲ್ಲದೇ ಈತನ ಬಳಿ ಇದ್ದ ಪಲ್ಸರ್ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಜಾವೀದ್ ರಬ್ಬಾನಿ ಎಂದು ಗುರುತಿಸಲಾಗಿದ್ದು, ಬಶೀರ್ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳಲು ತಲ್ವಾರ್ ಹಿಡಿದು ತಿರುಗುತ್ತಿದ್ದ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.