
ಬೆಂಗಳೂರು: ಬೆಂಗಳೂರಿನಲ್ಲಿ ಕಾಮುಕನೊಬ್ಬ ಒಂಟಿಯಾಗಿದ್ದ ಯುವತಿ ಮನೆ ಬಾಗಿಲು ಬಡಿದು ಗಲಾಟೆ ಮಾಡಿದ ಘಟನೆ ಜಯನಗರ 5 ನೇ ಬ್ಲಾಕ್ ನಲ್ಲಿ ನಡೆದಿದೆ.
ಅದೇ ಕಟ್ಟಡದಲ್ಲಿದ್ದ ಕಿರಣ ಎಂಬಾತ ಗಲಾಟೆ ಮಾಡಿದವ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಿದ್ದ ಯುವತಿಯನ್ನು ಗಮನಿಸಿದ ಈತ ಕಂಠಪೂರ್ತಿ ಕುಡಿದು ಬಾಗಿಲು ಬಡಿದಿದ್ದಾನೆ. ಇದರಿಂದ ಗಾಬರಿಗೊಂಡ ಮನೆ ಮಾಲೀಕರು ಹಾಗೂ ಸಿರಿಯಲ್ ನಟ ಶ್ರೀಧರ್ಗೆ ಕರೆ ಮಾಡಿದ್ದಾಳೆ.
ಸ್ಥಳಕ್ಕೆ ಹೋದ ಶ್ರೀಧರ್ ಕಾಮುಕನನ್ನು ತರಾಟೆ ತೆಗೆದುಕೊಂಡಿದ್ದಾರೆ. ಯಾಕೆ ಹೀಗೆ ಮಾಡಿದೆ ಎಂದರೆ ‘ಬೈ ಮಿಸ್ಟೇಕ್’ ಅಂತಾ ಹೇಳಿದ್ದಾನೆ.
ನಟ ಶ್ರೀಧರ್ ಕಾಮುಕನ ಗಲಾಟೆಯನ್ನು ಚಿತ್ರೀಕರಣ ಮಾಡಿದ್ದಾರೆ. ಯುವತಿ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಕಿರಣರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.