ನೈಜೀರಿಯಾ ಮೂಲದವರಿಂದ ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ

Published : May 22, 2017, 08:50 PM ISTUpdated : Apr 11, 2018, 12:51 PM IST
ನೈಜೀರಿಯಾ ಮೂಲದವರಿಂದ ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ

ಸಾರಾಂಶ

ಏಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಸ್ಥಳೀಯರು ಪ್ರಶ್ನಿಸಿದರೆ ಅವರ ಮೇಲೂ ಎಗರಾಡಿದ್ದಾರೆ.

ಬೆಂಗಳೂರು(ಮೇ.22): ಬೆಂಗಳೂರಿನಲ್ಲಿ ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಮೂಲದವರು ಹಲ್ಲೆ ಮಾಡಿದ ಘಟನೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರು ಲೇಔಟ್ ಬಳಿ ನಡೆದಿದೆ.

ನಿಂತಿದ್ದ ಕಾರಿಗೆ ನೈಜಿರಿಯಾ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ‌ ಕಾರು ಡಿಕ್ಕಿ ಹೊಡೆದಿದೆ. ಈ ಕುರಿತು ನೈಜಿರಿಯಾ ಮೂಲದ ಚಾಲಕನನ್ನು ಕಾರು ಚಾಲಕ ಪ್ರಶ್ನಿಸಿದ್ದಾನೆ. ಇದಕ್ಕೆ ನೈಜಿರಿಯಾ ಮೂಲದವರು ಗೂಂಡಾ ವರ್ತನೆ ತೋರಿದ್ದಾರೆ. ಏಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಸ್ಥಳೀಯರು ಪ್ರಶ್ನಿಸಿದರೆ ಅವರ ಮೇಲೂ ಎಗರಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕನ್ನಡಪರ ಸಂಘಟನೆ ಕಾರ್ಯಕರ್ತ

ಘಟನೆ ಕುರಿತು ಪ್ರಶ್ನಿಸಿದಾಗ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ