ಪಟಾಕಿ ಹೊಡೆದಿದ್ದಕ್ಕೆ ಕೇಸ್ ದಾಖಲು

Published : Nov 04, 2018, 01:50 PM IST
ಪಟಾಕಿ ಹೊಡೆದಿದ್ದಕ್ಕೆ ಕೇಸ್ ದಾಖಲು

ಸಾರಾಂಶ

ಗಂಭೀರ ಸ್ವರೂಪದ ವಾಯುಮಾಲಿನ್ಯದಿಂದಾಗಿ ಪಟಾಕಿ ಸಿಡಿತ ನಿಷೇಧಕ್ಕೆ ಒಳಪಟ್ಟಿರುವ ದೆಹಲಿಯಲ್ಲಿ, ನಿಷೇಧಿತ  ಸ್ವರೂಪದ ಪಟಾಕಿ ಸಿಡಿಸಿದ ಆರೋಪದ ಮೇಲೆ ಓರ್ವ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಲಾಗಿದೆ.  

ನವದೆಹಲಿ: ಗಂಭೀರ ಸ್ವರೂಪದ ವಾಯುಮಾಲಿನ್ಯದಿಂದಾಗಿ ಪಟಾಕಿ ಸಿಡಿತ ನಿಷೇಧಕ್ಕೆ ಒಳಪಟ್ಟಿರುವ ದೆಹಲಿಯಲ್ಲಿ, ನಿಷೇಧಿತ ಸ್ವರೂಪದ ಪಟಾಕಿ ಸಿಡಿಸಿದ ಆರೋಪದ ಮೇಲೆ ಓರ್ವ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಲಾಗಿದೆ.

ಪೂರ್ವ ದೆಹಲಿಯಲ್ಲಿ ಶುಕ್ರವಾರ ಸಂಜೆ ದಮನ್‌ದೀಪ್ ಎಂಬಾತ ಬಿಜ್ಲಿ ಎಂಬ ತೀವ್ರ ಸದ್ದು ಮಾಡುವ ಮತ್ತು ಭಾರೀ ಹಾನಿಕಾರಕ ವಸ್ತುಗಳನ್ನು ಹೊರಸೂಸುವ ಪಟಾಕಿಗಳನ್ನು ಸಿಡಿಸುತ್ತಿದ್ದ. ಈ ಬಗ್ಗೆ ನೆರೆಮನೆಯವರು ಸಾಕಷ್ಟು ಎಚ್ಚರಿಕೆ ನೀಡಿದರೂ ಆತ ಕಿವಿಗೊಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ದಮನ್ ದೀಪ್ ವಿರುದ್ಧ ಸ್ಥಳೀಯ ನಿವಾಸಿಗಳು ಪೊಲಿಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ದಮನ್‌ದೀಪ್ ಬಳಿ ಇದ್ದ ನಿಷೇಧಿತ ಪಟಾಕಿಗಳನ್ನು ವಶಪಡಿಸಿಕೊಂಡು, ಆತನ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಭಾರೀ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇವಲ ಹಸಿರು ಪಟಾಕಿ ಮಾತ್ರವೇ ಸಿಡಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಉಳಿದ ಯಾವುದೇ ರೀತಿಯ ಪಟಾಕಿ ಸಿಡಿಸಲು ನಿಷೇಧ ಹೇರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ
India Latest News Live: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ