ಆದಿತ್ಯನಾಥ್‌ ಕ್ಷೇತ್ರ ಗೋರಖ್‌ಪುರದಲ್ಲಿ ವ್ಯಕ್ತಿ ಸಜೀವ ದಹನ

By Suvarna Web DeskFirst Published Apr 10, 2017, 8:10 AM IST
Highlights

ತೆನುವಾ ಟೋಲ್‌ ಪ್ಲಾಜಾದ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯ ಕೈ ಮತ್ತು ಕಾಲುಗಳನ್ನು ಕಟ್ಟಿಕಾರಿಗೆ ಬೆಂಕಿ ಹಚ್ಚಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗೋರಖ್‌ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಕಟ್ಟುನಿಟ್ಟಾಗಿ ಜಾರಿ ಮಾಡಿರುವ ಹೊರತಾಗಿಯೂ, ಅವರ ಕ್ಷೇತ್ರವಾದ ಗೋರಖ್‌ಪುರದ ಸಹಜನ್ವಾದಲ್ಲಿ ವ್ಯಕ್ತಿಯೊಬ್ಬನನ್ನು ಜೀವಂತವಾಗಿ ದಹಿಸಿ ಹತ್ಯೆ ಮಾಡಲಾಗಿದೆ.

ತೆನುವಾ ಟೋಲ್‌ ಪ್ಲಾಜಾದ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯ ಕೈ ಮತ್ತು ಕಾಲುಗಳನ್ನು ಕಟ್ಟಿಕಾರಿಗೆ ಬೆಂಕಿ ಹಚ್ಚಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Latest Videos

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ ವ್ಯಕ್ತಿಯನ್ನು ಬದುಕಿಸಲು ಸಾಧ್ಯವಾಗಿಲ್ಲ. ಸಾವಿಗೀಡಾದ ವ್ಯಕ್ತಿಯ ಹಾಗೂ ದಾಳಿಕೋರರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

click me!