
ನವದೆಹಲಿ(ಜ.29): ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ‘ಹಿಂದು ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿದು ಹಾಕಬೇಕು’ ಎಂಬ ಹೇಳಿಕೆ ತೀವ್ರ ವಿವಾದವನ್ನು ಸೃಷ್ಟಿಸಿದೆ.
ಅನಂತ್ ಮಾತೆತ್ತಿದ್ರೆ ಸಮಾಜವನ್ನು ಒಡೆಯುವ, ಸಮಾಜದಲ್ಲಿ ಅಶಾಂತಿ ಹರಡುವ ಕೆಲಸವನ್ನೇ ಮಾಡುತ್ತಾರೆ ಎಂದು ಹಲವರು ಅವರ ವಿರುದ್ಧ ಕಿಡಿ ಕಾರುತ್ತಿದ್ದಾರೆ.
ಈ ಮಧ್ಯೆ ಹಿಂದು ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿಯುತ್ತೀವಿ..ಎಂಬ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಹಿಂದು-ಮುಸ್ಲಿಂ ಜೋಡಿಯೊಂದು ಚಾಲೆಂಜ್ ಮಾಡಿದೆ.
ಹೌದು, ಅನಂತ್ ಅವರ ಹೇಳಿಕೆ ವಿರೋಧಿಸಿ ತೆಹಸೀನ್ ಪೂನಾವಾಲಾ ಎಂಬುವವರು ಟ್ವೀಟ್ ಮಾಡಿದ್ದು, ಅದರಲ್ಲಿ ತಮ್ಮ ಹಿಂದು ಪತ್ನಿಯ ಜೊತೆ ಇರುವ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.
‘ಅನಂತ್ ಅವರೇ ನಾನು ಹಿಂದು ಹೆಣ್ಣನ್ನು ಮುಟ್ಟಿದ್ದೇನೆ, ಏನು ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ. ಇದು ನನ್ನ ಚಾಲೆಂಜ್ ಎಂದು ತೆಹಸೀನ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.
‘ಹಿಂದು ಹುಡುಗಿ ಮೈ ಮುಟ್ಟಿದ ಕೈ ಇರಬಾರದು'
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.