
ಭಾಲ್ಕಿ(ನ.25): ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಪಟ್ಟಣದ ಬಸ್ ನಿಲ್ದಾಣ ಸಮೀಪದಲ್ಲಿ ಶುಕ್ರವಾರ ನಡೆದಿದೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ಬಸ್ ನಿಲ್ದಾಣ ಸಮೀಪದ ವಿದ್ಯುತ್ ಕಂಬ ಏರಿದ. ಇದರಿಂದ ಸಾರ್ವಜನಿಕರು ಗಾಬರಿಗೊಂಡು ಕೂಡಲೇ ಕಂಬಂದಿಂದ ಇಳಿದು ಬರುವಂತೆ ಪರಿಪರಿಯಾಗಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅದೃಷ್ಟವಶಾತ ಕಂಬದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಕೆಲವರೂ ಕೂಡಲೇ ಜೆಸ್ಕಾಂ ಕಚೇರಿಗೆ ವಿಷಯ ಮುಟ್ಟಿಸಿ ವಿದ್ಯುತ್ ಸಂಪರ್ಕ ಹಾಕದಂತೆ ಮನವಿ ಮಾಡಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ವ್ಯಕ್ತಿಯನ್ನು ಕಂಬದಿಂದ ಕೆಳಗೆ ಬರುವಂತೆ ಕೇಳಿಕೊಂಡರು ಬರಲಿಲ್ಲ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಏಣಿ ಸಹಾಯದಿಂದ ಆತನನ್ನು ಕೆಳಗೆ ಇಳಿಸಿದರು. ವ್ಯಕ್ತಿ ಕಂಬ ಏಕೆ ಏರಿದ ಎಂಬುದು ಸ್ಪಷ್ಟವಾಗಿ ಗೊತ್ತಾಗದಿದ್ದರೂ ಮಾನಸಿಕ ಅಸ್ವಸ್ಥ ಇರುವ ಕಾರಣಕ್ಕೆ ವ್ಯಕ್ತಿ ವಿದ್ಯುತ್ ಕಂಬ ಏರಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತನ ಬಗ್ಗೆ ಯಾವುದೇ ಖಚಿತ ಮಾಹಿತಿ ತಿಳಿದು ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.