
ಕೂಡ್ಲಿಗಿ(ಅ.08): ಹೆತ್ತವರು ಮದುವೆ ಮಾಡಿಸುತ್ತಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ 60 ಅಡಿ ಎತ್ತರದ ಮರವೇರಿ ಕುಳಿತು ಎರಡು ದಿನ ಅಲ್ಲೇ ಠಿಕಾಣಿ ಹೂಡಿದ್ದ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಯಂಬಳಿ ವಡ್ಡರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಗ್ರಾಮದ ಬಸವರಾಜ್ (30) ಮರವೇರಿ ಕುಳಿತ ಯುವಕ.
ಮದುವೆ ಮಾಡಿ ಎಂದರೂ ಮನೆಯವರು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿರುವ ಯುವಕ ಶುಕ್ರವಾರ ಬೆಳಗ್ಗೆ ಗ್ರಾಮದ ಮಧ್ಯದಲ್ಲಿರುವ 60 ಅಡಿ ಎತ್ತರದ ಬೇವಿನ ಮರ ಏರಿ ರೆಂಬೆಯೊಂದರ ಮೇಲೆ ಕುಳಿತಿದ್ದಾನೆ. ಎರಡು ದಿನದಿಂದ ಆತನ ಮನೆಯವರು ಹಾಗೂ ಗ್ರಾಮಸ್ಥರು ಮನವೊಲಿಕೆಗೆ ಪ್ರಯತ್ನಿಸಿದರೂ ಆತ ಜಪ್ಪಯ್ಯ ಅನ್ನುತ್ತಿಲ್ಲ. ಶನಿವಾರವೂ ಮನವೊಲಿಕೆಗೆ ಬಗ್ಗದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹರಸಾಹಸ ಪಟ್ಟು ಆತನಿಗೆ ಮದುವೆ ಮಾಡುವ ಭರವಸೆ ನೀಡಿ ಸಂಜೆ ವೇಳೆ ಕೆಳಗಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.