
ಬಳ್ಳಾರಿ(ಫೆ.19): ಮಾಜಿ ಸಚಿವ ಕರುಣಾಕರ್ ರೆಡ್ಡಿ ಮತ್ತು ವಿಶ್ವನಾಥ್ ರೆಡ್ಡಿ ಅವರ ಮೇಲೆ ಶ್ರೀರಾಮುಲು ಆಪ್ತ ನಾಗಪ್ಪ ಎಂಬುವವರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಮನೆಗೆ ಹೋಗುತ್ತಿದ್ದಾಗ ಕರುಣಾಕರ್ ರೆಡ್ಡಿ ಮತ್ತು ವಿಶ್ವನಾಥ್ ರೆಡ್ಡಿ ತಮ್ಮನ್ನು ಜಾತಿಯಿಂದ ನಿಂದಿಸಿದ್ದಾರೆ ಎಂದು ನಾಗಪ್ಪ ದೂರು ನೀಡಿದ್ದಾರೆ. ಇಬ್ಬರ ವಿರುದ್ಧ ಬಳ್ಳಾರಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಸ್ತಿ ವಿಚಾರದಲ್ಲಿ ಗೊಂದಲದ ಕಾರಣ ಮಾಜಿ ಸಚಿವ ಕರುಣಾಕರ್ ರೆಡ್ಡಿ ಅವರು ಸಂಸದ ಶ್ರೀರಾಮುಲು ಸೇರಿ ಮೂವರ ಮೇಲೆ ಬಳ್ಳಾರಿಯ ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ ಬೆನ್ನೆಲ್ಲೆ ಈ ದೂರು ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.