
ಸೇಲಂ(ಆ.01): ಎಂಟು ಜನರ ಪ್ರಾಣವನ್ನು ರಕ್ಷಿಸಿದ ಬಳಿಕ ಮದನ್ (21) ಎಂಬಾತ ತಾನೇ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೆಟ್ಟೂರಿನ ಸಮೀಪ ಸೋಮವಾರ ನಡೆದಿದೆ. ಮಧನ್ ಮತ್ತು ಸ್ನೇಹಿತರು ತಮ್ಮ ಸಂಬಂಧಿ ಕೆ. ತಮಿಳರಸುವಿನ 19ನೇ ಜನ್ಮದಿನ ಆಚರಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮದ್ಯ ಸೇವನೆ ಮಾಡಿ, ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಿನಲ್ಲಿ ಮುಳುಗಿದ್ದರು. ಈಜಲು ಬರುತ್ತಿದ್ದ ಮಧನ್ ತನ್ನ 8 ಮಂದಿ ಸ್ನೇಹಿತರನ್ನು ರಕ್ಷಿಸಿದ ಬಳಿಕ ಕೆಸರಿನಲ್ಲಿ ಸಿಲುಕಿ ಅಸುನೀಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.