ತಿಂಗಳಿನಿಂದ ರೇಶನ್, ಆಹಾರ ಸಿಗದೆ ವ್ಯಕ್ತಿ ಸಾವು

Published : Jun 07, 2019, 08:34 PM ISTUpdated : Jun 07, 2019, 08:45 PM IST
ತಿಂಗಳಿನಿಂದ ರೇಶನ್, ಆಹಾರ ಸಿಗದೆ ವ್ಯಕ್ತಿ ಸಾವು

ಸಾರಾಂಶ

ಆಹಾರ ಸಿಗದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಸುದ್ದಿ ಜಾರ್ಖಂಡ್ ನಿಂದ ಬಂದಿದೆ. ರೇಶನ್ ವ್ಯವಸ್ಥೆಯಲ್ಲಿನ ವಿಳಂಬದಿಂದ ಹಸಿವು ತಾಳಲಾರದೆ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಆರೋಪ ಬಂದಿದೆ.

ರಾಂಚಿ[ಜೂ. 07]  ಸರಕಾರ ರೇಶನ್ ನೀಡಲು ಮಾಡಿಕೊಂಡ ವ್ಯವಸ್ಥೆಯ ಲೋಪ ವ್ಯಕ್ತಿಯ ಜೀವವನ್ನೆ ಬಲಿ ಪಡೆದುಕೊಂಡಿದೆ. ಜಾರ್ಖಂಡ್ ರಾಜ್ಯದ ಲಥಾರ್ ಜಿಲ್ಲೆಯ 65 ವರ್ಷದ ರಾಮ್ ಚರಣ ಮುಂಡಾ ಆಹಾರ ದೊರೆಯದೆ ಅಪೌಷ್ಟಿಕತೆಯಿಂದ  ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿಕೊಳ್ಳಲು ಸರಕಾರ ಮುಂದಾಗಿದ್ದರಿಂದ ಕಳೆದ ಮೂರು ತಿಂಗಳಿನಿಂದ ರೇಶನ್ ವ್ಯವಸ್ಥೆಯಲ್ಲಿ ವಿಳಂಬವಾಗಿತ್ತು.  ನೆಟ್ ವರ್ಕ್ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬಕ್ಕೆ ರೇಶನ್ ತಲುಪಿರಲಿಲ್ಲ. 

ಆದರೆ ಜಿಲ್ಲಾಡಳಿತ ಈ ಆರೋಪವನ್ನು ಅಲ್ಲಗಳೆದಿದೆ. ಅತಿಯಾದ ಮದ್ಯಸೇವನೆ ಚಟ ಅಂಟಿಸಿಕೊಂಡಿದ್ದರಿಂದ ಮುಂಡಾ ಸಾವಿಗೀಡಾಗಿದ್ದಾರೆ.  ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಎರಡು ದಿನಗಳ ಹಿಂದಷ್ಟೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎಂದಿದೆ.

ಮುಂಡಾ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಅಡುಗೆ ಮಾಡಿರಲಿಲ್ಲ ಎಂದು ಅಕ್ಕ-ಪಕ್ಕದ ಮನೆಯವರು ಹೇಳಿದ್ದಾರೆ.ನದಿನಗೂಲಿಯಾಗಿ ಕೆಲಸ ಮಾಡುತ್ತಿದ್ದ ಮುಂಡಾ ಉದ್ಯೋಗ ಖಾತ್ರಿ ಕೆಲಸಕ್ಕೂ ಹೋಗುತ್ತಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ: ವಿದ್ಯಾರ್ಥಿಗಳೇ ಬಲಿಪಶು!
COVID-19 Vaccine: ಯುವಕರ ಹೃದಯಾಘಾತಕ್ಕೆ ಕೊರೊನಾ ಲಸಿಕೆ ಕಾರಣನಾ? AIIMS ವರದಿ ಬಹಿರಂಗ