
ಹೈದ್ರಾಬಾದ್ : ಹೈದ್ರಾಬಾದ್’ನಲ್ಲಿ ವ್ಯಕ್ತಿಯೋರ್ವ ಸೂಸೈಡ್ ಲೆಟರ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು, ಕೆ. ಆಚಾರ್ಯ ಎಂಬ ಈ ವ್ಯಕ್ತಿ ತನ್ನ ಸೂಸೈಡ್ ಲೆಟರ್’ನಲ್ಲಿ ಪತ್ನಿಗೆ ಆಕೆಯ ಲವರ್’ನನ್ನು ವರಿಸುವಂತೆ ಬರೆದಿಟ್ಟು ಪ್ರಾಣ ಕಳೆದುಕೊಂಡಿದ್ದಾನೆ.
ಹೈದ್ರಾಬಾದ್’ನ ಯದಾದ್ರಿ ಬೊಂಗಿರ್ ಪ್ರದೇಶದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ 2 ವರ್ಷದ ಹಿಂದೆ ಉಷಾರಾಣಿ ಎಂಬಾಕೆಯನ್ನು ವಿವಾಹವಾಗಿದ್ದ ಆಚಾರ್ಯಗೆ ಒಂದು ವರ್ಷದ ಹೆಣ್ಣು ಮಗುವೂ ಕೂಡ ಇದೆ.
ಬುಧವಾರ ಈ ವ್ಯಕ್ತಿ ತನ್ನ ತಂದೆಗೆ ಸಂದೇಶವೊಂದನ್ನು ಕಳುಹಿಸಿದ್ದು, ತಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ವೇಳೆ ಅವರ ತಂದೆ ತಿರುಗಿ ಕರೆ ಮಾಡಿದಾಗ ಅವರ ಫೋನ್ ಸ್ವಿಚ್ ಆಫ್ ಆಗಿದ್ದಾಗಿ ಅವರ ತಂದೆ ಹೇಳಿದ್ದಾರೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ತನ್ನ ಆತ್ಮಹತ್ಯೆಗೆ ಕಾರಣ ತನ್ನ ಪತ್ನಿಯ ಅಕ್ರಮ ಸಂಬಂಧ ಎಂದು ತಂದೆಗೆ ಎಸ್’ಎಂಎಸ್’ನಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.