
ಅಹಮದಾಬಾದ್(ಅ.02): ರೈಲಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿಗಳಿಗೆ ರೈಲು ಪ್ರಯಾಣದ ವೇಳೆ ಪ್ರತ್ಯೇಕ ಸೀಟು ನೀಡಬೇಕು ಎಂದು ಕೋರಿ ಗುಜರಾತ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಭಾರತ ವಿವಿಧ ಸಂಸ್ಕೃತಿಯ ದೇಶ. ಇಲ್ಲಿ ಎಲ್ಲಾ ರೀತಿಯ ಆಹಾರ ಸಂಸ್ಕೃತಿಯ ಜನರಿದ್ದಾರೆ. ಹೀಗಾಗಿ ಪ್ರಯಾಣಿಕರ ಆದ್ಯತೆಗೆ ಅನುಗುಣವಾಗಿ ಸೀಟು ನೀಡಬೇಕು. ಮಾಂಸಾಹಾರ ತಿನ್ನುವವರಿಂದ ಸಸ್ಯಾಹಾರಿಗಳಿಗೆ ತೊಂದರೆ ಆಗಬಹುದು. ಹೀಗಾಗಿ ಆಹಾರ ಪದ್ಧತಿಗೆ ಅನುಗುಣವಾಗಿ ಸೀಟು ನೀಡಬೇಕು. ಟಿಕೆಟ್ ಬುಕ್ ಮಾಡುವಾಗಲೇ ಆಹಾರ ಕೂಡಾ ಬುಕ್ ಮಾಡಿರುವ ಕಾರಣ, ಹೀಗೆ ಮಾಡುವುದಕ್ಕೆ ತೊಂದರೆ ಆಗಲಾರದು ಎಂದು ಸ್ವತಃ ಸಸ್ಯಾಹಾರಿಯಾಗಿರುವ ಸೈಯದ್ ಎನ್ನುವವರು ಅರ್ಜಿಯಲ್ಲಿ ಕೋರಿದ್ದಾರೆ.
ರೈಲಿನಲ್ಲಿ ಪ್ರಯಾಣಿಕರ ಆದ್ಯತೆಗೆ ಅನುಗುಣವಾಗಿ ಸಸ್ಯಹಾರಿ ಹಾಗೂ ಮಾಂಸಹಾರಿಗಳಿಗೆ ಪ್ರತ್ಯೇಕ ಸೀಟು ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಂದಿನ ವಾರ ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.