
ಬೆಂಗಳೂರು, [ನ.20]: ಮಾರಕಾಸ್ತ್ರಗಳಿಂದ ಕೊಚ್ಚಿ ಬಾಡಿ ಬಿಲ್ಡರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಿನ್ನೆ [ಸೋಮವಾರ] ತಡರಾತ್ರಿ ನಡೆದಿದೆ.
ಶಿವಾಜಿನಗರದ ಹಳೆ ಸಿಮೇಂಟ್ರಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಇರ್ಫಾನ್ ಅಲಿಯಾಸ್ ಮಚ್ಚಿ ಕೊಲೆಯಾದ ಯುವಕ.
ಇರ್ಫಾನ್ ಜಿಮ್ ಮುಗಿಸಿ ಬರುವಾಗ ಮೂವರು ಹೆಲ್ಮೆಟ್ ಧರಿಸಿದ್ದ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಂತರ ತೀವ್ರ ಗಾಯದಿಂದ ಬಿದ್ದಿದ್ದ ಇರ್ಫಾನ್, ಪತ್ನಿ ರೋಷನ್ ಗೆ ಕಾಲ್ ಮಾಡಿ ವಿಷಯ ತಿಳಿಸಿದ್ದಾನೆ.
ಆದರೆ, ಮನೆಯವರೆಲ್ಲ ಬರುವಷ್ಟರಲ್ಲಿ ಇರ್ಫಾನ್ ಜೀವ ಹೋಗಿತ್ತು. ಅಕ್ವೇರಿಯಂ ಶಾಪ್ ಇಟ್ಟುಕೊಂಡಿದ್ದ ಇರ್ಫಾನ್. ಹುಡುಗಿ ವಿಚಾರವಾಗಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.
ಈ ಬಗ್ಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ