
ಬೆಂಗಳೂರು(ಅ. 23): ನಗರದಲ್ಲಿ ಸಿನಿಮೀಯ ರೀತಿಯಲ್ಲಿ ಯುವಕನೊಬ್ಬ ಅಪಹರಣ ನಡೆದ ಘಟನೆ ಬೆಳಕಿಗೆ ಬಂದಿದೆ. ಮೊನ್ನೆ ಅ. 21ರಂದು ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್'ನಿಂದ ಸಂತೋಷ್ ಎಂಬುವವರ ಅಪಹರಣವಾಗಿದೆ. ಸಂತೋಷ್ ಅಂದು ದೇವಸ್ಥಾನಕ್ಕೆ ಹೋಗಲು ಶೇರಿಂಗ್'ನಲ್ಲಿ ಓಲಾ ಕ್ಯಾಬ್ ಬುಕ್ ಮಾಡಿರುತ್ತಾರೆ. ಆಗ ಅದೇ ಒಲಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಾರಾಯಣ ಇಟೆಕ್ನೋ ಶಾಲೆ ಬಳಿ ಸಂತೋಷ್'ರನ್ನು ಅಪಹರಿಸುತ್ತಾರೆ.
ಕಾರಿನಲ್ಲೇ ಸಂತೋಷ್'ಗೆ ಹಣಕ್ಕಾಗಿ ಪೀಡಿಸಿ ಹಲ್ಲೆ ನಡೆಸುತ್ತಾರೆ. ಸಂತೋಷ್'ನನ್ನು ಕಾರಿನಲ್ಲಿ ಕೂಡಿಸಿಕೊಂಡು ನೆಲಮಂಗಲ, ಜಾಲಹಳ್ಳಿ, ಬಿಇಎಲ್ ಸೇರಿ ನಗರ ಹಾಗೂ ನಗರದ ಸುತ್ತಮುತ್ತ ಹಲವೆಡೆ ಸುತ್ತುತ್ತಾರೆ. ಕೊನೆಗೆ ಪೇಟಿಎಂ ಮೂಲಕ ಸಂತೋಷ್'ನಿಂದ 18 ಸಾವಿರ ರೂ ಹಣ ವಸೂಲಿ ಮಾಡುತ್ತಾರೆ. ಹಣ ಸಿಕ್ಕ ಬಳಿಕ ಕಿಡ್ನಾಪರ್ಸ್ ಗ್ಯಾಂಗು ಲುಂಬಿನಿ ಗಾರ್ಡನ್ಸ್ ಬಳಿ ಸಂತೋಷ್'ನನ್ನು ಬಿಟ್ಟು ಪರಾರಿಯಾಗುತ್ತದೆ.
ದೊಡ್ಡಬಳ್ಳಾಪುರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸಂತೋಷ್ ಅವರು ಸದ್ಯ ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕೃತ್ಯದಲ್ಲಿ ಒಲಾ ಕ್ಯಾಬ್ ಡ್ರೈವರ್'ನ ಪಾತ್ರವಿದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಈ ಘಟನೆಯಿಂದ ಕ್ಯಾಬ್'ಗಳ ಸುರಕ್ಷತೆಯ ಮಟ್ಟದ ಬಗ್ಗೆ ಅನುಮಾನ ಮೂಡುವುದಂತೂ ಹೌದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.