
ವಾಸಿಮ್(ಜೂ.23): ತನ್ನ ಎದುರಾಳಿ ಭೂಮಿ ಉಳುಮೆ ಮಾಡುವುದನ್ನು ನಿಲ್ಲಿಸಲು ಮಗನೊಬ್ಬ ತನ್ನ ತಾಯಿಯನ್ನೆ ಟ್ರಾಕ್ಟರ್ ಮುಂದೆ ಎಸೆದಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ವಾಸಿಮ್ ಜಿಲ್ಲೆಯಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೇಗಾವ್ ಪೊಲೀಸರು 15 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬನನ್ನು ಬಂಧಿಸಿದ್ದಾರೆ. ಭೂಮಿ ವಿವಾದವೇರ್ಪಟ್ಟಿದ್ದ ವ್ಯಕ್ತಿ ಟ್ರಾಕ್ಟರ್ ನಲ್ಲಿ ಭೂಮಿ ಉಳುತ್ತಿದ್ದಾಗ ತಡೆಯಲು ಮುಂದಾದ ಮಗ, ತನ್ನ ತಾಯಿಯನ್ನೇ ಟ್ರಾಕ್ಟರ್ ಮುಂದೆ ಎಸೆದಿದ್ದಾನೆ.
ಭೂ ವಿವಾದದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಎರಡು ಕಡೆಯವರ ಮೇಲೂ ಎಫ್ ಐಆರ್ ದಾಖಲಿಸಲಾಗಿದೆ. ಒಬ್ಬನನ್ನು ಬಂಧಿಸಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ ಎಂದು ಮಾಲೇಗಾವ್ ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಸುರೇಶ್ ನಾಯಕ್ ನಾವಾರೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.