
ಬೆಂಗಳೂರು(ಫೆ.04): ಕಳೆದ ಮೂರುವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಜ್ಯೋತಿ ಎಂಬವರ ಮೇಲೆ ನಡೆದ ATM ಹಲ್ಲೆ ಪ್ರಕರಣ ದೇಶದಾದ್ಯಂತ ಚರ್ಚೆಗೀಡಾಗಿತ್ತು. ಜನರನ್ನು ಬೆಚ್ಚಿ ಬೀಳಿಸಿದ್ದ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹಲ್ಲೆ ನಡೆಸಿದ ವ್ಯಕ್ತಿ ಸಿಕ್ಕಿ ಬಿದ್ದಿದ್ದಾನೆ ಎಂಬ ವದಂತಿ ಹರಿದಾಡಲಾರಂಭಿಸಿದೆ.
ಆಂಧ್ರದ ಮದನಪಲ್ಲಿಯಲ್ಲಿ ಈ ಎಟಿಎಂ ರಾಕ್ಷಸ ಸಿಕ್ಕಿಬಿದ್ದಿದ್ದಾನಂತೆ. ಆದರೆ ಸಿಕ್ಕಿಬಿದ್ದ ವ್ಯಕ್ತಿ ಅಂದು ಹಲ್ಲೆ ನಡೆಸಿದಾತನಾ ಅಥವಾ ಅಮಾಯಕನಾ ಎಂಬುವುದು ತಿಳಿಯಬೇಕಷ್ಟೇ.
ಕಳೆದ ಮೂರುವರೆ ವರ್ಷಗಳ ಹಿಂದೆ ಬೆಂಗಳೂರಿಬನ ಎಟಿಎಂ ಒಂದರಲ್ಲಿ ಜ್ಯೋತಿ ಎಂಬಾಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಅಳವಡಿಸಿದ್ದ ಸಿಸಿಟಿವಿಯಲ್ಲಿ ಈ ಭಯಾನಕ ದೃಶ್ಯಗಳು ಸೆರೆಯಾಗಿದ್ದವು. ಈ ಘಟನೆ ಜನರಲ್ಲೂ ಭೀತಿ ಮೂಡಿಸಿತ್ತು. ಆದರೆ ಘಟನೆ ನಡೆದು ವರ್ಷಗಳೇ ಕಳೆದರೂ ಈತನನ್ನು ಹಿಡಿಯಲು ಸಾಧ್ಯವಾಗಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.