
ಚಿತ್ರದುರ್ಗ(ಫೆ.02): ಅವರಿಬ್ಬರೂ ಕಳೆದ ಹತ್ತು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿ ಮಾಡ್ತಿದ್ರು. ಬಳಿಕ ಮದುವೆ ಕೂಡ ಆದ್ರು. ಅವರ ಪ್ರೀತಿಗೆ ಸಾಕ್ಷಿ ಎಂಬಂತೆ ಒಂದು ಗಂಡು ಮಗು ಕೂಡ ಇದೆ. ಆದ್ರೆ ಪ್ರೀತಿಸಿ ಮದುವೆಯಾದ ಹೆಂಡತಿಗೆ ಕೈ ಕೊಟ್ಟ ಗಂಡ ಮೋಸ ಮಾಡಿ ಮತ್ತೊಬ್ಬಳನ್ನ ಮದುವೆಯಾಗಿ ತಲೆಮರೆಸಿಕೊಂಡಿದ್ದ. ಆದರೆ ವಿಷಯ ತಿಳಿದ ಮೊದಲ ಹೆಂಡತಿ ಬುರ್ಕಾ ಹಾಕಿಕೊಂಡು ಮಂಗಳಾರತಿ ಮಾಡಿದ್ದಾಳೆ.
ಚಿತ್ರದುರ್ಗ ತಾಲೂಕಿನ ಮೆದೆಹಳ್ಳಿ ಗ್ರಾಮದ ಸಹನಾ ಹತ್ತು ವರ್ಷಗಳ ಹಿಂದೆ ಬಳ್ಳಾರಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಗುರುಮೂರ್ತಿಯನ್ನು ಮದುವೆಯಾಗಿದ್ದ. ಆದರೂ ಗುರುಮೂರ್ತಿ ಈಕೆಯನ್ನು ಬಿಟ್ಟು ಈಗ ಮತ್ತೊಬ್ಬಳನ್ನು ಮದುವೆ ಮಾಡಿಕೊಂಡಿದ್ದಾನೆ. ಇದರಿಂದ ಬೇಸತ್ತ ಸಹನಾ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದರೂ ನ್ಯಾಯ ಸಿಕ್ಕಿಲ್ಲ.
ನಿನ್ನೆ ರಾತ್ರಿ ಸ್ನೇಹಿತನ ಮನೇಲಿ ಪಾರ್ಟಿ ಮಾಡ್ಕೊಂಡು ಮಜಾ ಮಾಡುತ್ತಿದ್ದ ಗಂಡನ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿಗೆ ಸಹನಾ ಬುರ್ಕಾ ಹಾಕಿಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.