
ಮಂಡ್ಯ: ಪಾಂಡವಪುರ ಸಮೀಪದ ಕನಗನಮರಡಿಯಲ್ಲಿ ಇತ್ತೀಚೆಗೆ ವಿಸಿ ನಾಲೆಗೆ ಬಸ್ ಉರುಳಿ 30 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಹೊಳಲು ಗ್ರಾಮದ ನಿವಾಸಿ ಶಿವಣ್ಣ ಬಂಧಿತ ಆರೋಪಿ.
ಘಟನೆ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದು ಕಳೆದ 15 ದಿನಗಳಿಂದ ಪೊಲೀಸರು ಆತನ ತಲಾಶೆಯಲ್ಲಿದ್ದರು. ಇದೀಗ ನಿವಾಸಿ ಚಾಲಕ ಶಿವಣ್ಣನನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸೋಮವಾರ ಮಂಡ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಬಸ್ ದುರಂತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ವರದಿ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.