ಬೆಳೆಗಳಿಗೆ ನೀರಿಲ್ಲ: ಮಂಡ್ಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

Published : Sep 11, 2016, 05:55 AM ISTUpdated : Apr 11, 2018, 12:41 PM IST
ಬೆಳೆಗಳಿಗೆ ನೀರಿಲ್ಲ: ಮಂಡ್ಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

ಸಾರಾಂಶ

ಮಂಡ್ಯ(ಸೆ.11): ಮಂಡ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದು ಮತ್ತೊಬ್ಬ ರೈತ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. 

ಪಾಂಡವಪುರ ತಾಲೂಕಿನ ಜವರೇಗೌಡ ಕೊಪ್ಪಲು ಗ್ರಾಮದ ಮಾದೇಗೌಡ(50) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಈತ ವಿವಿಧ ಬ್ಯಾಂಕಿನಲ್ಲಿ ಒಟ್ಟು 3.5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. 

ಒಂದು ಕಡೆ ಸಾಲ ಮಾಡಿ 3 ಬೋರ್ ವೆಲ್‌ಗಳನ್ನು ಕೊರೆಸಿದ್ದ ಮಾದೇಗೌಡ, ಆದರೆ ನೀರು ಬರದೆ ನಷ್ಟ ಅನುಭವಿಸಿದ್ದರು. ಅದಲ್ಲದೇ ಜಮೀನಿಗೆ ಹರಿಯುತ್ತಿದ್ದ ಕಾವೇರಿ ನೀರನ್ನು ಸಹ ನಿಲ್ಲಿಸಿದ್ದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಸ್ಥಳಕ್ಕೆ ಸಂಸದ ಸಿ.ಎಸ್.ಪುಟ್ಟರಾಜು, ಜಿಲ್ಲಾಧಿಕಾರಿ, ತಹಶೀಲ್ದಾರ್ ಭೇಟಿ ನೀಡಿದ್ದಾರೆ, ಈ ಸಂದರ್ಭದಲ್ಲಿ ಮೃತ ರೈತ ಕುಟುಂಬಕ್ಕೆ ಜಿಲ್ಲಾಡಳಿತ 5 ಲಕ್ಷ ರೂಪಾಯಿ ನೀಡುವಂತೆ ಸಿ.ಎಸ್,ಪುಟ್ಟರಾಜು ಆಗ್ರಹಿಸಿದ್ದಾರೆ. ಇದಲ್ಲದೇ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಂಸದರು ಮನವಿ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NIMHANS MindNote app: ಮಾನಸಿಕ ಆರೋಗ್ಯಕ್ಕೆ ನಿಮ್ಹಾನ್ಸ್ ಮೈಂಡ್‌ ನೋಟ್‌ ಆ್ಯಪ್: ಈಗ ಕನ್ನಡದಲ್ಲಿ!
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ