ಬಿಜೆಪಿ ಸೇರುವ ಸೂಚನೆ ನೀಡಿದ ಮಂಡ್ಯದ ಪ್ರಭಾವಿ ಮುಖಂಡ ?

Published : Aug 12, 2019, 01:25 PM IST
ಬಿಜೆಪಿ ಸೇರುವ ಸೂಚನೆ ನೀಡಿದ ಮಂಡ್ಯದ ಪ್ರಭಾವಿ ಮುಖಂಡ ?

ಸಾರಾಂಶ

ಕರ್ನಾಟಕ ರಾಜ್ಯದಲ್ಲಿ ಹಲವು ಶಾಸಕರು ಅನರ್ಹರಾದರು. ಅದರಲ್ಲಿ ಮಂದ್ಯದ ಪ್ರಭಾವಿ ಮುಖಂಡರೋರ್ವರು ಬಿಜೆಪಿ ಸೇರುವ ಮುನ್ಸೂಚನೆ ನೀಡಿದ್ದಾರೆ. 

ಮಂಡ್ಯ [ ಆ.12]: ಅತೃಪ್ತರಾಗಿ ರಾಜೀನಾಮೆ ನೀಡಿ ಅನರ್ಹರಾದ ಕೆ.ಆರ್ ಪೇಟೆ ಶಾಸಕ ನಾರಾಯಣ ಗೌಡ ಉಪ ಚುನಾವಣೆ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ. 

ಮಂಡ್ಯದಲ್ಲಿ ಮಾತನಾಡಿದ ನಾರಾಯಣ ಗೌಡ ಜನರ ನಿರ್ಧಾರ ಕೇಳಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು. ಅಲ್ಲದೇ ಈಗಿನ ಮುಖ್ಯಮಂತ್ರಿ ನಮ್ಮ ತಾಲೂಕಿನವರೇ ಆಗಿದ್ದು, ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ಇದೆ ಎಂದರು. 

ರಾಜೀನಾಮೆಗೆ ಕಾರಣ ಬಿಚ್ಚಿಟ್ಟ KR ಪೇಟೆ ಅನರ್ಹ ಶಾಸಕ

ತಾಲೂಕಿನ ಮಗನಾಗಿ ಸಿಎಂ ಯಡಿಯೂರಪ್ಪ ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ ಎಂದು ಹೊಗಳಿದ ನಾರಾಯಣ ಗೌಡ BSY ಹೊಗುಳವ ಮೂಲಕ ಬಿಜೆಪಿ ಸೇರುವ ಮುನ್ಸೂಚನೆ ನೀಡಿದರಾ ಎನ್ನಲಾಗುತ್ತಿದೆ. 

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ನಾರಾಯಣಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ನನ್ನನ್ನು ಕ್ರಿಮಿನಲ್ ಅನ್ನುತ್ತಾರೆ. ಆದರೆ ಯಾರು ಕ್ರಿಮಿನಲ್ ಎನ್ನವುದು ಸಂದರ್ಭ ಬಂದಾಗ ತಿಳಿಯುತ್ತೆ. ಇದಕ್ಕೆ ಸಾಕ್ಷಿ ನೀಡಲಿ ಎಂದರು. 

ಇನ್ನು ಮಾಜಿ ಸಚಿವ ಪುಟ್ಟರಾಜು ಅವರೂ ಕೂಡ ತಮ್ಮ ಪಕ್ಷದ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎಂದು ಈ ವೇಳೆ ನಾರಾಯಣ ಗೌಡ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ
ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಖುಷಿ: ಬಿ.ಕೆ.ಹರಿಪ್ರಸಾದ್‌