ಉಪಚುನಾವಣೆ: ರಾಜಕೀಯ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠ

Published : Oct 09, 2018, 03:21 PM ISTUpdated : Oct 09, 2018, 06:24 PM IST
ಉಪಚುನಾವಣೆ: ರಾಜಕೀಯ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠ

ಸಾರಾಂಶ

ಇಂದು ಅಮವಾಸ್ಯೆ ದಿನದಂದು ಮಂಡ್ಯದ ನಾಗಮಂಲದಲ್ಲಿರುವ ಆದಿಚುಂಚನಗಿರಿ ಮಠ ಅಕ್ಷರಶಃ ರಾಜಕೀಯ ಶಕ್ತಿ ಕೇಂದ್ರವಾಗಿದೆ.

ಮಂಡ್ಯ, [ಅ.09]: ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ನಾಗಮಂಲದಲ್ಲಿರುವ ಆದಿಚುಂಚನಗಿರಿ ಮಠ ಇಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

ಇಂದು ಅಮವಾಸ್ಯೆ ನೆಪದಲ್ಲಿ ಮಂಡ್ಯ ಲೋಕಸಭಾ ಜೆಡಿಎಸ್ ಟಿಕೆಟ್ ಗಾಗಿ ಆಕಾಂಕ್ಷಿಗಳು ಆದಿಚುಂಚನಗಿರಿ ಮಠದ ನಿರ್ಮಲಾನಂದಶ್ರೀಗಳ ಮೊರೆ ಹೋಗಿದ್ದಾರೆ.

ಮಂಡ್ಯ ಲೋಕಸಭಾ ಉಪಚುನಾವಣೆ: ಜೆಡಿಎಸ್ ಟಿಕೆಟ್ ಯಾರಿಗೆ..?

ಮಂಡ್ಯ ಲೋಕಸಭಾ ಜೆಡಿಎಸ್ ಟಿಕೆಟ್ ಗಾಗಿ ಆಕಾಂಕ್ಷಿಗಳಾದ ಲಕ್ಷ್ಮಿ ಅಶ್ವಿನ್ ಗೌಡ ಹಾಗೂ ಎಲ್.ಆರ್.ಶಿವರಾಮೇಗೌಡ ಅವರು ಮಠಕ್ಕೆ ಭೇಟಿ ನೀಡಿ ಕಾಲಭೈರವನ ಅಮವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡರು.

ಪೂಜೆ ಬಳಿಕ ಮೊದಲಿಗೆ ಲಕ್ಷ್ಮಿ ಅಶ್ವಿನ್ ಗೌಡ ಅವರು ನಿರ್ಮಲಾನಂದಶ್ರೀಗಳನ್ನ ಭೇಟಿ ಮಾಡಿದ್ದು, ಟಿಕೆಟ್ ಕೊಡಿಸುವಂತೆ ಶ್ರೀಗಳ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಮೇಲೆ ಒತ್ತಡ ಹೇರಿದ್ದಾರೆ.

ಈ ಹಿಂದೆ ಸಚಿವ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವೇಳೆಯೂ ಸಹ ಸಚಿವ ಸ್ಥಾನದ ಆಕಾಂಕ್ಷಿಗಳು ನಿರ್ಮಲಾನಂದಶ್ರೀಗಳ ಮೊರೆ ಹೋಗಿದ್ದರು.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಸಹ ಶ್ರೀಗಳ ಮಾತಿಗೆ ವಿರುದ್ಧದ ಕಾರ್ಯಗಳನ್ನು ಮಾಡಿಲ್ಲ. ಒಂದು ರೀತಿಯಲ್ಲಿ ಶ್ರೀಗಳು ಜೆಡಿಎಸ್ ಹೈಕಮಾಂಡ್ ಎನ್ನಬಹುದು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!