
ಮಂಡ್ಯ : ಶ್ರೀ ಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 8 ಮಂದಿ ಕನ್ನಡಿಗರು ಮೃತರಾಗಿದ್ದು, ನಾಗಮಂಗಲದ ವ್ಯಕ್ತಿಯೋರ್ವರು ಮೃತರಾಗಿದ್ದಾರೆ.
ನಾಗಮಂಗಲ ತಾಲೂಕಿನ ಬೆಟ್ಟದಕೋಟೆ ಗ್ರಾಮದ ರಮೇಶ್ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ.
ಬೆಟ್ಟದಕೋಟೆ ಗ್ರಾಮದ ಕೆ.ಇ.ಬಿ. ನಿವೃತ್ತ ನೌಕರ ಲಕ್ಷ್ಮಣಗೌಡರ ಮಗ ರಮೇಶ್ ಕೆಲ ವರ್ಷಗಳಿಂದ ತುಮಕೂರಿನಲ್ಲಿ ನೆಲೆಸಿದ್ದರು.
ನಾಗಮಂಗಲ ತಾಲೂಕಿನ ಬೆಟ್ಟದ ಕೋಟೆ ಗ್ರಾಮಕ್ಕೆ ರಮೇಶ್ ಮೃತದೇಹ ತಂದು ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ದತೆ ನಡೆಸಿದ್ದಾರೆ.
ಬುಧವಾರ ರಾತ್ರಿ ಅಥವಾ ಗುರುವಾರ ಮೃತದೇಹವನ್ನು ಸ್ವ ಗ್ರಾಮಕ್ಕೆ ತರು ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.