ಆತ್ಮಹತ್ಯೆಗೆ ಪ್ರಚೋದಿಸುವವರು ನಮ್ಮ ರಾಜ್ಯದಲ್ಲೂ ಇದ್ದಾರೆ ಹುಷಾರ್!

Published : Jul 08, 2018, 06:51 PM IST
ಆತ್ಮಹತ್ಯೆಗೆ ಪ್ರಚೋದಿಸುವವರು ನಮ್ಮ ರಾಜ್ಯದಲ್ಲೂ  ಇದ್ದಾರೆ ಹುಷಾರ್!

ಸಾರಾಂಶ

ಮೋಕ್ಷ ಸಿಗುತ್ತದೆ  ಎಂದು ದೆಹಲಿಯಲ್ಲಿ ಒಂದೇ ಕುಟುಂಬದ 11 ಜನರು ಎಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈಗ ಅಂಥದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ.. ಅದು ನಮ್ಮ ರಾಜ್ಯದಲ್ಲೇ!  

ಮಂಡ್ಯ[ಜು.8]  ದೆಹಲಿಯ ಬುರಾರಿಯಲ್ಲಿ ಭಾಟಿಯಾ ಕುಟುಂಬದ ನಿಗೂಢ ಸಾವಿನ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಮಂಡ್ಯದಲ್ಲಿ ಮೋಕ್ಷಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋಸಿದ ಪ್ರಕರಣ ವರದಿಯಾಗಿದೆ. 

ಮಂಡ್ಯ ತಾಲೂಕಿನ ಮಾರಗೊಂಡನಹಳ್ಳಿಯ ಅನಿತಾ ಎಂಬುವವರಿಗೆ ತೃತೀಯ ಲಿಂಗಿಯೊಬ್ಬರು ಪ್ರಚೋದನೆ ನೀಡಿದ್ದಾರೆ. ನೀನು ಸತ್ತರೆ ನಿನ್ನ ಸಾವಿನಿಂದ ಮಕ್ಕಳಿಗೆ ಮೋಕ್ಷ ಸಿಗುತ್ತದೆ ಎಂದು ಹೇಳಿದ್ದಾರೆ. ಅನಿತಾ ಆಘಾತಕಾರಿ ಅಂಶವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ವೃತ್ತಿಯಲ್ಲಿ ಟೈಲರ್​ ಆಗಿರುವ ಅನಿತಾ ಮತ್ತು ಅವರ ಪತಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ವಾಸವಾಗಿದ್ದಾರೆ. ನೀನು ನೇಣು ಹಾಕಿಕೊಂಡರೆ ಮಕ್ಕಳಿಗೆ ಮುಕ್ತಿ ಮತ್ತು ಮೋಕ್ಷ ಸಿಗುತ್ತದೆ ಎಂದು ತೃತೀಯ ಲಿಂಗಿ ಮಾಂತ್ರಿಕನೊಬ್ಬ ಪ್ರಚೋದನೆ ನೀಡಿದ್ದ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲು
ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್