ಗಾಂಜಾ ದಂಧೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಮನೆಗೆ ಪೆಟ್ರೋಲ್ ಸುರಿದು ಕುಟುಂಬವನ್ನೇ ಕೊಲ್ಲಲು ಯತ್ನ

Published : Oct 29, 2016, 01:10 AM ISTUpdated : Apr 11, 2018, 12:51 PM IST
ಗಾಂಜಾ ದಂಧೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಮನೆಗೆ ಪೆಟ್ರೋಲ್ ಸುರಿದು ಕುಟುಂಬವನ್ನೇ ಕೊಲ್ಲಲು ಯತ್ನ

ಸಾರಾಂಶ

ಗಾಂಜಾ ವ್ಯಸನ ತ್ಯಜಿಸುವಂತೆ ಹಿತವಚನ ಹೇಳಿದ್ದಕ್ಕೆ ಆ ಪ್ರದೇಶದ ಯುವಕರು ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಗಾಯಗೊಂಡ 58ರ ಹರೆಯದ ತಾರಾನಾಥ್ ಯಾದವ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿ ಬಸ್ತಿಪಡ್ಪು ಎಂಬಲ್ಲಿ ಈ ಘಟನೆ ನಡೆದಿದೆ. ಮನೆಯ ವೆಂಟಿಲೇಟರ್ ಮೂಲಕ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಬೆಡ್​ರೂಮ್​ನೊಳಗೆ ವ್ಯಾಪಿಸುತ್ತಿದ್ದಂತೆಯೇ ಪತ್ನಿ ವಿದ್ಯಾ ಸಮಯಪ್ರಜ್ಞೆ ಮೆರೆದು ಪತಿಯ ಜೊತೆ ಪುತ್ರ 10 ವರ್ಷದ ಮಿಥುನ್​ ಅವರನ್ನು ರಕ್ಷಿಸಿದ್ದಾರೆ.

ಮಂಗಳೂರು(ಅ.29): ಕಿಟಕಿ ಮೂಲಕ ಪೆಟ್ರೋಲ್ ಎಸೆದು ಬೆಂಕಿ ಇಟ್ಟು ಮನೆಯವರನ್ನ ಕೊಲ್ಲಲು ಯತ್ನಿಸಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯ ಯಜಮಾನನಿಗೆ ಸುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪತ್ನಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ಗಾಂಜಾ ವ್ಯಸನ ತ್ಯಜಿಸುವಂತೆ ಹಿತವಚನ ಹೇಳಿದ್ದಕ್ಕೆ ಆ ಪ್ರದೇಶದ ಯುವಕರು ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಗಾಯಗೊಂಡ 58ರ ಹರೆಯದ ತಾರಾನಾಥ್ ಯಾದವ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿ ಬಸ್ತಿಪಡ್ಪು ಎಂಬಲ್ಲಿ ಈ ಘಟನೆ ನಡೆದಿದೆ. ಮನೆಯ ವೆಂಟಿಲೇಟರ್ ಮೂಲಕ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಬೆಡ್​ರೂಮ್​ನೊಳಗೆ ವ್ಯಾಪಿಸುತ್ತಿದ್ದಂತೆಯೇ ಪತ್ನಿ ವಿದ್ಯಾ ಸಮಯಪ್ರಜ್ಞೆ ಮೆರೆದು ಪತಿಯ ಜೊತೆ ಪುತ್ರ 10 ವರ್ಷದ ಮಿಥುನ್​ ಅವರನ್ನು ರಕ್ಷಿಸಿದ್ದಾರೆ.

ಘಟನೆಯಲ್ಲಿ ತಾರಾನಾಥ ಅವರ ಎರಡು ಕೈಗಳಿಗೆ ಸುಟ್ಟ ಗಾಯಗಳಾಗಿದೆ. ಪರಿಸರದಲ್ಲಿ ಹರಡುತ್ತಿರುವ ಗಾಂಜಾ ಹಾವಳಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಪ್ರತೀಕಾರವಾಗಿ ಈ ಕೃತ್ಯ ನಡೆಸಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಡೀಪುರ: ಹುಲಿ ಪಂಜದ ಒಂದೇ ಏಟಿಗೆ ಉಸಿರು ನಿಲ್ಲಿಸಿದ ವಾಚರ್!
ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ