ಬಶೀರ್ ಹತ್ಯೆಗೆ ಜೈಲಲ್ಲೇ ಸ್ಕೆಚ್ : ಬಯಲಾಯ್ತು ಸ್ಫೋಟಕ ಮಾಹಿತಿ

Published : Jan 24, 2018, 01:31 PM ISTUpdated : Apr 11, 2018, 01:05 PM IST
ಬಶೀರ್ ಹತ್ಯೆಗೆ ಜೈಲಲ್ಲೇ ಸ್ಕೆಚ್ : ಬಯಲಾಯ್ತು ಸ್ಫೋಟಕ ಮಾಹಿತಿ

ಸಾರಾಂಶ

ಮಂಗಳೂರಿನಲ್ಲಿ ನಡೆದ ಬಶೀರ್ ಹತ್ಯೆ ಪ್ರಕರಣ ಸಂಬಂಧ ಇದೀಗ ಸ್ಫೋಟಕ ಮಾಹಿತಿಯೊಂದು ಬಯಲಾಗಿದೆ.

ಮಂಗಳೂರು (ಜ.24): ಮಂಗಳೂರಿನಲ್ಲಿ ನಡೆದ ಬಶೀರ್ ಹತ್ಯೆ ಪ್ರಕರಣ ಸಂಬಂಧ ಇದೀಗ ಸ್ಫೋಟಕ ಮಾಹಿತಿಯೊಂದು ಬಯಲಾಗಿದೆ. ಬಶೀರ್ ಹತ್ಯೆಗೆ ಜೈಲಿನಿಂದಲೇ ಸ್ಕೆಚ್ ಹಾಕಲಾದ ವಿಚಾರವೊಂದು ಬೆಳಕಿಗೆ ಬಂದಿದೆ. ಕಲ್ಲಡ್ಕದಲ್ಲಿ ನಡೆದಿದ್ದ ಕೋಮು ಸಂಘರ್ಷದ ರೂವಾರಿ ಮಿಥುನ್,  ದೀಪಕ್ ರಾವ್ ಕೊಲೆ ಬೆನ್ನಲ್ಲೇ ಈ ಸ್ಕೆಚ್ ಹಾಕಿದ್ದ ಎನ್ನಲಾಗಿದೆ.

ಜೈಲಿನಲ್ಲೇ ಮಿಥುನ್ ಭೇಟಿಯಾದ ತಿಲಕ್ ರಾಜ್, ರಾಜು ಎಂಬುವವರು ಹೊರಗಿದ್ದ ಅನುಪ್ ಎಂಬಾತನ ಮೂಲಕ ಹತ್ಯೆಗೆ ಸ್ಕೆಚ್ ಹಾಕಿದ್ದರು. ಬಳಿಕ ಒಂದಷ್ಟು ಜನರನ್ನು ಸೇರಿಸಿ ಜ.3ರಂದು ಕೊಟ್ಟಾರದಲ್ಲಿ ಬಶೀರ್ ಹತ್ಯೆ ಯತ್ನ ನಡೆದಿತ್ತು. ಜನವರಿ 7ರಂದು ಬಶೀರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಚ್‌ಎಎಲ್‌ ಸ್ಥಾಪನಾ ದಿನ: ಭಾರತದ ಏರೋಸ್ಪೇಸ್‌ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ
70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ