ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ..? ಹೋರಾಟಕ್ಕೆ ಸಜ್ಜಾದ ಹಿಂದೂ ಸಂಘಟನೆಗಳು

Published : Jan 01, 2018, 02:33 PM ISTUpdated : Apr 11, 2018, 12:59 PM IST
ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ..? ಹೋರಾಟಕ್ಕೆ ಸಜ್ಜಾದ ಹಿಂದೂ ಸಂಘಟನೆಗಳು

ಸಾರಾಂಶ

ಕಡಲ ತಡಿ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರೋದು ಬೆಳಕಿಗೆ ಬಂದಿದೆ. ಕಾಸರಗೋಡಿನ ಪ್ರಭಾವಿ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಜಿಹಾದ್ ಬಲೆಗೆ ಬಿದ್ದಿರೋ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಮಂಗಳೂರು (ಜ.1): ಕಡಲ ತಡಿ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರೋದು ಬೆಳಕಿಗೆ ಬಂದಿದೆ. ಕಾಸರಗೋಡಿನ ಪ್ರಭಾವಿ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಜಿಹಾದ್ ಬಲೆಗೆ ಬಿದ್ದಿರೋ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ಬಗ್ಗೆ ಬಜರಂಗದಳ ಕೇಂದ್ರದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೂ ದೂರು ನೀಡೋ ಮೂಲಕ ಪ್ರಕರಣ ಗಂಭೀರತೆ ಪಡೆದುಕೊಂಡಿದೆ.

ನಗರದ ಎಸ್ ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಕಳೆದ ಕೆಲ ತಿಂಗಳ ಹಿಂದೆಯೇ ಮುಂಬೈ ಮೂಲದ ಮಹಮ್ಮದ್ ಇಕ್ಬಾಲ್ ಎಂಬಾತನ ಜೊತೆಗೆ ತೆರಳಿದ್ದು, ಸದ್ಯ ವಿಶ್ವಹಿಂದೂ ಪರಿಷತ್ ಬಜರಂಗದಳ ಈ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಭಾರೀ ಪ್ರತಿಭಟನೆಗೆ ಸಿದ್ಧತೆ ನಡೆಸಿದೆ.

ಮೂಡಬಿದ್ರೆ ಮತ್ತು ಮೈಸೂರು ಪ್ರಕರಣದ ಬೆನ್ನಲ್ಲೇ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಲವ್ ಜಿಹಾದ್ ಗೆ ಸಿಲುಕಿರೋದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಾಸರಗೋಡು ಮೂಲದ ಪ್ರಭಾವಿ ಹಿಂದೂ ಮುಖಂಡ ಸದ್ಯ ಮಂಗಳೂರಿನಲ್ಲಿ ನೆಲೆಸಿರೋ ವ್ಯಕ್ತಿಯೊಬ್ಬರ ಮಗಳಿಗೆ ಆರು ವರ್ಷಗಳ ಹಿಂದೆಯೇ ಫೇಸ್ ಬುಕ್ ನಲ್ಲಿ ಇಕ್ಬಾಲ್ ಪರಿಚಯವಾಗಿದ್ದು, ಕೆಲ ತಿಂಗಳ ಹಿಂದಷ್ಟೆ ಆಕೆ ಆತನ ಜೊತೆ ತೆರಳಿದ್ದಾಳೆ.

ಆದರೆ ಘಟನೆ ಹೊರಬಾರದ ಕಾರಣ ಗೌಪ್ಯವಾಗಿಯೇ ಇದ್ದು, ಇದೀಗ ಕೆಲ ದಿನಗಳ ಹಿಂದಷ್ಟೇ ಮಾಹಿತಿ ಹೊರಬಿದ್ದಿದೆ. ಈ ನಡುವೆ ಮುಂಬೈನಲ್ಲಿ ಇಕ್ಬಾಲ್ ಜೊತೆಗೆ ಆಕೆಯ ವಿವಾಹ ಕೂಡ ಆಗಿದ್ದು, ಸದ್ಯ ಆಕೆಯನ್ನ ಮಂಗಳೂರಿಗೆ ಕರೆ ತರಲಾಗಿದೆ ಎನ್ನಲಾಗಿದೆ.

ಆದರೆ ಇಕ್ಬಾಲ್ ಈ ಬಗ್ಗೆ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಇದೀಗ ಯುವತಿ ತಾನು ಹೆತ್ತವರ ಜೊತೆಗೆ ಇಚ್ಚೆಯನುಸಾರವೇ ಬಂದಿರೋದಾಗಿ ಅಫಿಡವಿತ್ ಸಲ್ಲಿಸಿದ್ದು, ಮಹಾರಾಷ್ಟ್ರ ಪೊಲೀಸ್ ಇಲಾಖೆಗೂ ತಲುಪಿಸಲಾಗಿದೆ ಎಂದು ತಿಳಿದು ಬಂದಿದೆ.

ಆದ್ರೆ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಬೃಹತ್ ಹೋರಾಟಕ್ಕೆ ವೇದಿಕೆ ಸಿದ್ದಪಡಿಸಿದ್ದು, ರಾಜ್ಯದ ಹಲವು ಲವ್ ಜಿಹಾದ್ ಪ್ರಕರಣಗಳ ವಿರುದ್ದ ಹೋರಾಟಕ್ಕೆ ಸಜ್ಜಾಗಿದ್ದಾರೆ. ಸದ್ಯ ಯುವತಿ ಎಲ್ಲಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಆದ್ರೆ ಇಕ್ಬಾಲ್ ದೂರಿನಂತೆ ಮಹಾರಾಷ್ಟ್ರ ಪೊಲೀಸರು ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು!
India Latest News Live: ಪಂಜಾಬ್‌ನ 3 ಸ್ಥಳಗಳಿನ್ನು ಪವಿತ್ರ ನಗರಿ: ಮದ್ಯ, ಮಾಂಸ ಸೇಲ್‌ ನಿಷೇಧ