
ಕೊಪ್ಪಳ(ಅ.05): ಲಂಚದ ಹಣಕ್ಕಾಗಿ ಮಾಂಗಲ್ಯ ಸರವನ್ನು ಅಡವಿಡಲು ಮುಂದಾಗಿರುವ ಪ್ರಕರಣವೊಂದು ಕೊಪ್ಪಳದಲ್ಲಿ ನಡೆದಿದೆ.
ತಾಲೂಕಿನ ಮೈನಹಳ್ಳಿ ಗ್ರಾಮದಲ್ಲೊಂದು ಇಡೀ ಸಮಾಜವೇ ತೆಲೆತೆಗ್ಗಿಸುವ ಪ್ರಕರಣವೊಂದು ನಡೆದಿದೆ. ಈ ಗ್ರಾಮದಲ್ಲಿ ಹನುಮಂತಪ್ಪ ಹಾಗೂ ದ್ರಾಕ್ಷಾಯಣಿ ಎನ್ನುವ ಬಡದಂಪತಿ ಕಳೆದ 40 ವರ್ಷಳಿಂದ ಜೀವನ ಸಾಗಿಸುತ್ತಿದೆ.
ಅದರೆ ಇವರಿಗೊಂದು ಸ್ವತಃ ಸೂರಿಲ್ಲ. ಈ ಹಿನ್ನಲೆಯಲ್ಲಿ ಕಾಡಿ ಬೇಡಿ ಕಳೆದ ಎಪ್ರೀಲ್ ತಿಂಗಳಲ್ಲಿ ದ್ರಾಕ್ಷಾಯಣಿ ಹೆಸರಿನಲ್ಲಿ ಅಂಬೇಡ್ಕರ್ ವಸತಿ ಯೋಜನೆಯಡಿ 1.50 ಲಕ್ಷ ಮೊತ್ತದ ಆಶ್ರಯ ಮನೆಯನ್ನು ಗ್ರಾಮ ಪಂಚಾಯತಿಯವರು ಹಂಚಿಕೆ ಮಾಡಿದರು.
ಆದರೆ ಈಗ ಹಣ ಬಿಡುಗಡೆಗೆ 30 ಸಾವಿರ ದುಡ್ಡು ಕೇಳುತ್ತಿದ್ದು, ಮಂಗಲ್ಯ ಸರವನ್ನೇ ಗಿರಿವಿ ಇಡುವ ಪರಿಸ್ಥಿತಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.