
ನವದೆಹಲಿ(ಫೆ.12): ಇತ್ತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿಯನ್ನು ನೀಚ ಮನುಷ್ಯ ಎಂದು ಜರಿದು ಪಕ್ಷದಿಂದ ಶಿಕ್ಷೆಗೆ ಗುರಿಯಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಮತ್ತೊಮ್ಮೆ ಪಾಕಿಸ್ತಾನ ನನಗೆ ಭಾರತದಂತೆಯೆ ಪ್ರಿಯವಾದ ದೇಶ ಎಂದು ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.
ಕರಾಚಿಯ ಸಮಾರಂಭದಲ್ಲಿ ಮಾತನಾಡಿದ ಅವರು, ನಿರಂತರ ಮಾತುಕತೆಯ ಮೂಲಕ ಎರಡೂ ದೇಶಗಳು ಸಂಬಂಧವನ್ನು ಸುಧಾರಿಸಿಕೊಳ್ಳಬಹುದು. ಸೌಹಾರ್ದಯುತ ಮಾತುಕತೆಯೊಂದೆ ಭಾರತ - ಪಾಕಿಸ್ತಾನ ಸ್ನೇಹವೃದ್ಧಿಗೆ ಪರಿಹಾರ ಎಂದು ಹೇಳಿದರು.
ಭಾರತದಂತೆಯೇ ಪಾಕಿಸ್ತಾನವನ್ನು ಇಷ್ಟಪಡುತ್ತೇನೆ. ಭಾರತ ಕೂಡ ತನ್ನ ನೆರೆಯವರನ್ನು ತನ್ನಂತೆಯೇ ಪ್ರೀತಿಸಬೇಕು. ಕಾಶ್ಮೀರ ಹಾಗೂ ಭಯೋತ್ಪಾದನೆ ಎರಡೂ ದೇಶಗಳಿಗೂ ತೊಡಕಾಗಿರುವ ಪ್ರಮುಖ ಸಮಸ್ಯೆ' ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಪ್ ಆಡಳಿತದಲ್ಲಿ ಎರಡೂ ದೆಶಗಳ ಸಂಬಂಧ ಸುಧಾರಣೆಗೆ ಉತ್ತಮ ವೇದಿಕೆ ಕಲ್ಪಿಸಲಾಗಿತ್ತು'ಎಂದು ಹಳೆಯ ನೆನಪುಗಳನ್ನು ನೆನಪಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.