ನೀಚ್ ಆದ್ಮಿ: ಆಡಿದ ಪ್ರತಿ ಶಬ್ಧಕ್ಕೂ ಈಗಲೂ ಬದ್ಧ ಎಂದ ಅಯ್ಯರ್!

Published : May 14, 2019, 03:07 PM IST
ನೀಚ್ ಆದ್ಮಿ: ಆಡಿದ ಪ್ರತಿ ಶಬ್ಧಕ್ಕೂ ಈಗಲೂ ಬದ್ಧ ಎಂದ ಅಯ್ಯರ್!

ಸಾರಾಂಶ

ನೀಚ್ ಆದ್ಮಿ ಹೇಳಿಕೆಗೆ ಈಗಲೂ ಬದ್ಧ ಎಂದ ಮಣಿಶಂಕರ್ ಅಯ್ಯರ್| ಪ್ರಧಾನಿ ಮೋದಿ ವಿರುದ್ಧ ಕೀಳು ಪದ ಬಳಸಿದ್ದ ಮಣಿಶಂಕರ್ ಅಯ್ಯರ್| ‘ಸೈನಿಕರ ತ್ಯಾಗವನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಮೋದಿ’| ಮೋದಿ ಅವರನ್ನು ನೀಚ್ ಆದ್ಮಿ ಎಂದು ಕರೆದು ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಮಣಿಶಂಕರ್ ಅಯ್ಯರ್|

ನವದೆಹಲಿ(ಮೇ.12): ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನೀಚ್ ಆದ್ಮಿ(ಕೀಳು ಮನುಷ್ಯ) ಎಂದು ವಿವಾದ ಸೃಷ್ಟಿಸಿದ್ದ ಮಾಜಿ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್, ತಮ್ಮ ಹೇಳಿಕೆಗೆ ಈಗಲೂ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ತಾವು ಆಡಿದ ಪ್ರತಿಯೊಂದೂ ಶಬ್ಧಕ್ಕೂ ಈಗಲೂ ಬದ್ಧವಾಗಿದ್ದು, ಸೈನಿಕರ ತ್ಯಾಗವನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಂಡ ಮೋದಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ಹರಿಹಾಯ್ದಿದ್ದಾರೆ.

ತಮ್ಮ ಅಭಿಪ್ರಾಯದಂತೆ ಮೋದಿ ಓರ್ವ ನಾಗರಿಕ ವ್ಯಕ್ತಿಯೇ ಅಲ್ಲ ಎಂದಿರುವ ಮಣಿಶಂಕರ್, ತಮ್ಮ ರಾಜಕೀಯ ಲಾಭಕ್ಕೆ ಮೋದಿ ಯಾರನ್ನಾದರೂ ಬಳಸಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.

2017ರ ಡಿಸೆಂಬರ್‌ನಲ್ಲಿ ಪತ್ರಿಕೆಯೊಂದರಲ್ಲಿ ಅಂಕಣ ಬರೆದಿದ್ದ ಅಯ್ಯರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ್ ಆದ್ಮಿ ಎಂದು ಹೇಳಿಕೆ ನೀಡಿ ಪಕ್ಷದಿಂದಲೇ ಅಮಾನತಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ