ಮುಖ್ಯಮಂತ್ರಿ ಮೇಲೆ ಉಗ್ರರ ದಾಳಿ

Published : Oct 24, 2016, 08:26 AM ISTUpdated : Apr 11, 2018, 01:11 PM IST
ಮುಖ್ಯಮಂತ್ರಿ ಮೇಲೆ ಉಗ್ರರ ದಾಳಿ

ಸಾರಾಂಶ

ಘಟನೆ ನಡೆದ ನಂತರ ಮುಖ್ಯಮಂತ್ರಿಯವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಿ ಸಂಪುಟ ಸಭೆಯ ತುರ್ತು ಸಭೆ ಹಮ್ಮಿಕೊಂಡರು

ಇಂಫಾಲ(24): ಮಣಿಪುರ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ಅವರು ಉಗ್ರರ ಗುಂಡಿನ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಉಕ್ರುಲ್ ಪ್ರದೇಶದ ಹೆಲಿಪ್ಯಾಡ್'ನಿಂದ ಇಳಿಯುತ್ತಿದ್ದಾಗ ಉಗ್ರರು  ಏಕಾಏಕಿ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಸಿಎಂ ಒಕ್ರಮ್ ಇಬೋಬಿ ಸಿಂಗ್ ಅವರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ ಮಣಿಪುರ ರೈಫಲ್ಸ್'ನ ಒಬ್ಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾನೆ. ಉಗ್ರರು ದಾಳಿ ನಡೆಸಿದ ತಕ್ಷಣವೇ ಹೆಲಿಕಾಪ್ಟರ್ ಬೇರೆ ಕಡೆ ಸ್ಥಳಾಂತರವಾಯಿತು.

ಘಟನೆ ನಡೆದ ನಂತರ ಮುಖ್ಯಮಂತ್ರಿಯವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಿ ಸಂಪುಟ ಸಭೆಯ ತುರ್ತು ಸಭೆ ಹಮ್ಮಿಕೊಂಡರು. ಉಕ್ರುಲ್ ಜಿಲ್ಲೆಯ ಜಿಲ್ಲಾಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕಿತ್ತು. ದಾಳಿಗೂ ಮುಂಚೆ ಮುಖ್ಯಮಂತ್ರಿ ಉದ್ಘಾಟಿಸಬೇಕಿದ್ದ ಆಸ್ಪತ್ರೆ ಸನಿಹದಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದ್ದರು.ದಾಳಿ ನಡೆಸಿದ ಪರಿಣಾಮ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬರ್ಲಿನ್‌ನಲ್ಲಿ ಟಿವಿಎಸ್‌ ಬೈಕ್ : ರಾಹುಲ್‌ ಗಾಂಧಿ ಭಾರಿ ಮೆಚ್ಚುಗೆ
ಇಂದು ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ