
ಬೆಂಗಳೂರು(ಮಾ.30): ಹೊಳೆನರಸೀಪುರದಿಂದ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು ಸರ್ಕಾರಿ ಹುದ್ದೆಗೆ ನೀಡಿರುವ ರಾಜೀನಾಮೆ ಪತ್ರ ಅಂಗೀಕಾರಕ್ಕೆ ಇನ್ನಿಲ್ಲದ ಕಸರತ್ತು ಮಾಡತೊಡಗಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಕಳೆದ ನವೆಂಬರ್ 2ರಂದೇ ರಾಜೀನಾಮೆ ಪತ್ರ ನೀಡಿದ್ದರೂ ಈವರೆಗೂ ಅಂಗೀಕಾರ ವಾಗಿಲ್ಲ. ಈ ಮಧ್ಯೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ರಾಜೀನಾಮೆ ಪತ್ರವನ್ನು ತಕ್ಷಣ ಅಂಗೀಕರಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಜೇಗೌಡ ದುಂಬಾಲು ಬಿದ್ದಿದ್ದು, ಈಗ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜೀನಾಮೆ ಪತ್ರದ ಕಡತ ಹಣಕಾಸು ಇಲಾಖೆಯನ್ನು ತಲುಪಿದೆ.
ಅಂಗೀಕಾರ ತಡೆಗೆ ಜೆಡಿಎಸ್ ಯತ್ನ ವದಂತಿ: ಮಂಜೇಗೌಡ ಅವರು ಜೆಡಿಎಸ್ನ ಎಚ್.ಡಿ. ರೇವಣ್ಣ ವಿರುದ್ಧ ಕಾಂಗ್ರೆಸ್ಸಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಇದನ್ನು ತಡೆಯಲು ರಾಜೀನಾಮೆ ಪತ್ರ ಅಂಗೀಕಾರವಾಗದಂತೆ ಜೆಡಿಎಸ್ ಪ್ರಯತ್ನ ಮಾಡುತ್ತಿದೆ ಎಂಬ ವದಂತಿ ಸುಳಿದಾಡುತ್ತಿದೆ. ಈ ಹಿಂದೆ ಕೆಎಎಸ್ ಅಧಿಕಾರಿ ಯಾಗಿದ್ದ ವೀರಭದ್ರಯ್ಯ ಜೆಡಿಎಸ್ನಿಂದ ಮಧುಗಿರಿಯಲ್ಲಿ ಸ್ಪರ್ಧಿಸಲು ರಾಜೀನಾಮೆ ನೀಡಿದಾಗ ಬಿಜೆಪಿ ಸರ್ಕಾರ ಅಂಗೀಕರಿಸಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.