
ನವದೆಹಲಿ [ಆ.02]: ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದಿಂದ ಖಾಲಿಯಾಗಿರುವ ರಾಜಸ್ಥಾನದ ರಾಜ್ಯಸಭಾ ಸ್ಥಾನಕ್ಕೆ ಗುರುವಾರ ಚುನಾವಣೆ ದಿನಾಂಕ ಘೋಷಿಸಲಾಗಿದೆ.
ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್, ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಅವರನ್ನು ಈ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆ ಇದೆ.
ಸತತ 5 ಬಾರಿ ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಸಿಂಗ್ರ ಸದಸ್ಯತ್ವ ಅವಧಿ ಇದೇ ಜೂನ್ 14ಕ್ಕೆ ಮುಕ್ತಾಯವಾಗಿತ್ತು. ಆದರೆ ಅಸ್ಸಾಂನಲ್ಲಿ ಕಾಂಗ್ರೆಸ್ ಬಹುಮತ ಹೊಂದಿರದ ಕಾರಣ, ಸಿಂಗ್ರನ್ನು ಮತ್ತೆ ಅಲ್ಲಿಂದ ಕಳುಹಿಸುವುದು ಕಾಂಗ್ರೆಸ್ಗೆ ಸಾಧ್ಯವಾಗಿರಲಿಲ್ಲ.
ಹೀಗಾಗಿ ಇದೀಗ ರಾಜಸ್ಥಾನದಿಂದ ಅವರನ್ನು ಮರಳಿ ರಾಜ್ಯಸಭೆಗೆ ಕಳುಹಿಸಲು ನಿರ್ಧರಿಸಲಾಗಿದೆ. ಆ.26ಕ್ಕೆ ರಾಜಸ್ಥಾನ ರಾಜ್ಯಸಭೆ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.