
ನವದೆಹಲಿ [ಜೂ.28] : ತಮಗೆ ನೀಡಲಾಗಿರುವ ಸಿಬ್ಬಂದಿ ಸಂಖ್ಯೆಯನ್ನು ಕಡಿತ ಮಾಡದಂತೆ ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಕೇಂದ್ರ ಸರ್ಕಾರಕ್ಕೆ ಮತ್ತೆ ಪತ್ರ ಬರೆದಿದ್ದಾರೆ. ಇದಕ್ಕೆ ತಮ್ಮ ಯುಪಿಎ ಸರ್ಕಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ನೀಡಿದ್ದ ಗೌರವವನ್ನು ಸಿಂಗ್ ಉದಾಹರಿಸಿದ್ದಾರೆ.
ಮಾಜಿ ಪ್ರಧಾನಿಗಳಿಗೆ 14 ಸಿಬ್ಬಂದಿಗಳ ಸೇವೆ ಒದಗಿಸಬೇಕು. ನಿವೃತ್ತಿಯ 5 ವರ್ಷ ಬಳಿಕ ಆ ಸಂಖ್ಯೆಯನ್ನು 5ಕ್ಕೆ ಇಳಿಸಬೇಕು ಎಂದು ನರಸಿಂಹರಾವ್ ಪ್ರಧಾನಿಯಾಗಿದ್ದಾಗ ನಿರ್ಧರಿಸಲಾಗಿತ್ತು. ಅದರಂತೆ ಕಳೆದ ಮೇ 25ರಂದು ಮಾಜಿ ಪ್ರಧಾನಿ ಸಿಂಗ್ಗೆ ನೀಡಿದ್ದ ಸಿಬ್ಬಂದಿ ಸಂಖ್ಯೆಯನ್ನು 5ಕ್ಕೆ ಇಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿತ ಮಾಡದಂತೆ ಸಿಂಗ್ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಮೇ 26 ರಂದು ಸ್ಪಷ್ಟಪಡಿಸಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿರುವ ಸಿಂಗ್, ಯುಪಿಎ ಸರ್ಕಾರದ ಅವಧಿಯಲ್ಲಿ ಅಟಲ್ ಅವರ ಬೇಡಿಕೆಯಂತೆ ಅವರಿಗೆ 12 ಸಿಬ್ಬಂದಿಗಳನ್ನು ಸರ್ಕಾರದ ಪರವಾಗಿ ಒದಗಿಸಲಾಗಿತ್ತು. ಅದೇ ರೀತಿಯ ಕೃತಜ್ಞತೆಯನ್ನು ಸರ್ಕಾರ ತಮಗೂ ತೋರಬೇಕು ಎಂದು ಸಿಂಗ್ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.