ಕರ್ನಾಟಕ ಚುನಾವಣೆ ಮುಗಿಯುವವರೆಗೂ ಮಹದಾಯಿ ಚರ್ಚೆ ಇಲ್ಲ

Published : Dec 30, 2017, 08:24 AM ISTUpdated : Apr 11, 2018, 12:53 PM IST
ಕರ್ನಾಟಕ ಚುನಾವಣೆ ಮುಗಿಯುವವರೆಗೂ ಮಹದಾಯಿ ಚರ್ಚೆ ಇಲ್ಲ

ಸಾರಾಂಶ

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಚುನಾವಣೆ ಮುಗಿವವರೆಗೂ ತಾವು ಮಾತುಕತೆ ನಡೆಸುವ ಇರಾದೆ ಹೊಂದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಹೇಳಿದ್ದಾರೆ.

ಪಣಜಿ (ಡಿ.30): ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಚುನಾವಣೆ ಮುಗಿವವರೆಗೂ ತಾವು ಮಾತುಕತೆ ನಡೆಸುವ ಇರಾದೆ ಹೊಂದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಹೇಳಿದ್ದಾರೆ. ಈ ಮೂಲಕ ಮಹದಾಯಿ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಮಾತುಕತೆ ನಡೆಯುವ ಸಾಧ್ಯತೆ ಕ್ಷೀಣ ವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಇನ್ನು ಕೆಲವು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತಿದೆ.

ಇನ್ನು 1-2 ತಿಂಗಳಲ್ಲಿ ಆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತಿದೆ. ಹೀಗಾಗಿ ಮಾತುಕತೆ ಇಲ್ಲ’ ಎಂದು ಉತ್ತರಿಸಿದರು. ‘ಅಷ್ಟೊತ್ತಿಗೇ ಮಹದಾಯಿ ನ್ಯಾಯಾಧಿಕರಣದ ವಿಚಾರಣೆ ಕೂಡ ಆರಂಭವಾಗುತ್ತಿದ್ದು, ತೀರ್ಪು ಬರುವ ವಿಶ್ವಾಸವೂ ಇದೆ’ ಎಂದು ಹೇಳುವ ಮೂಲಕ ಮಾತುಕತೆ ಸಾಧ್ಯತೆಯನ್ನು ತಳ್ಳಿಹಾಕಿದರು.

ಮಹದಾಯಿ ನ್ಯಾಯಾಧಿಕರಣದ ಅವಧಿ 2018ರ ಆಗಸ್ಟ್‌ಗೆ ಮುಗಿಯುತ್ತದೆ.  ಇನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ಕೋರಿ ಬರೆದ ಪತ್ರದ ಬಗ್ಗೆಯೂ ಉತ್ತರಿಸಿದ ಗೋವಾ ಮುಖ್ಯಮಂತ್ರಿ, ‘ಈವರೆಗೂ ಕರ್ನಾಟಕ ಮುಖ್ಯ ಮಂತ್ರಿ ಪತ್ರ ಕೈಸೇರಿಲ್ಲ’ ಎಂದಷ್ಟೇ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!