ನೈತಿಕ ರಾಜಕಾರಣ ಸತ್ತಿದೆ: ಬಿಜೆಪಿ ನಡೆ ಟೀಕಿಸಿದ ಮಾಜಿ ಸಿಎಂ ಪುತ್ರ!

Published : Jul 11, 2019, 03:14 PM ISTUpdated : Jul 11, 2019, 03:27 PM IST
ನೈತಿಕ  ರಾಜಕಾರಣ ಸತ್ತಿದೆ: ಬಿಜೆಪಿ ನಡೆ ಟೀಕಿಸಿದ ಮಾಜಿ ಸಿಎಂ ಪುತ್ರ!

ಸಾರಾಂಶ

ಸ್ವಪಕ್ಷದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಪುತ್ರ! 'ಅಧಿಕಾರ ಭದ್ರಪಡಿಸಿಕೊಳ್ಳಲು ಬಿಜೆಪಿಯ ನಡೆ ಒಪ್ಪತಕ್ಕದಲ್ಲ'| ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಅಸಮಾಧಾನ| ರಾಜ್ಯದ ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಆಕ್ರೋಶ ವ್ಯಕ್ತಪಡಿಸಿದ ಉತ್ಪಲ್ ಪರಿಕ್ಕರ್| ತಂದೆಯ ಸಾವಿನೊಂದಿಗೆ ನೈತಿಕ ರಾಜಕಾರಣ ಕೊನೆಗೊಂಡಿದೆ ಎಂದ ಉತ್ಪಲ್|

ಪಣಜಿ(ಜು.11): ಗೋವಾದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಪ್ರತಿಕ್ರಿಯೆ ನೀಡಿರುವ ಗೋವಾ ಮಾಜಿ ಸಿಎಂ ದಿವಂಗತ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್, ರಾಜ್ಯದಲ್ಲಿ ನೈತಿಕ ರಾಜಕಾರಣ ತಮ್ಮ ತಂದೆಯ ಸಾವಿನೊಂದಿಗೆ ಕೊನೆಗೊಂಡಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ಭದ್ರ ಮಾಡಿಕೊಳ್ಳುವ ಬಿಜೆಪಿ ತಂತ್ರಗಾರಿಕೆಯನ್ನು ಉತ್ಪಲ್ ತೀವ್ರವಾಗಿ ಟೀಕಿಸಿದ್ದಾರೆ. ಶಾಸಕರನ್ನು ಖರೀದಿಸುವ, ಬೆದರಿಸುವ ತಂತ್ರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ತಂದೆ ಮನೋಹರ್ ಪರಿಕ್ಕರ್ ರಾಜ್ಯದಲ್ಲಿ ನೈತಿಕ ರಾಜಕಾರಣಕ್ಕೆ ಭದ್ರ ಬುನಾದಿ ಹಾಕಿದ್ದರು. ಆದರೆ ಅವರಿಲ್ಲದ ರಾಜ್ಯ ಬಿಜೆಪಿ ಘಟಕ ಇದೀಗ ಅವರ ಆದರ್ಶಗಳನ್ನು ಮರೆತಂತಿದೆ ಎಂದು ಉತ್ಪಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ