
ನವದೆಹಲಿ: ತಮಗೆ ಗಂಭೀರ ಸ್ವರೂಪದ ಕಾಯಿಲೆ ಇರುವ ಬಗ್ಗೆ ವೈದ್ಯರು ಮಾಹಿತಿ ನೀಡಿದಾಗ ನಾನು ಹೆದರಲಿಲ್ಲ. ಬದಲಾಗಿ ಇಚ್ಛಾಶಕ್ತಿಯಿಂದಾಗಿ ಆ ಕಾಯಿಲೆಯಿಂದ ಚೇತರಿಸಿಕೊಂಡೆ ಎಂದು ಗೋವಾ ಸಿಎಂ ಮನೋಹರ್ ಪರಿಕರ್ ಹೇಳಿದ್ದಾರೆ.
ಬುಧವಾರ ಗೋವಾ ಪತ್ರಿಕೆಗಳ ಸಂಪಾದಕರೊಂದಿಗೆ ನಡೆಸಿದ ಸಂವಾದದ ವೇಳೆ, ಸಂಪಾದಕರೊಬ್ಬರು ಕಾಯಿಲೆ ಬಗ್ಗೆ ಕೇಳಿದಾಗ, ಕೆಲ ಕಾಲ ಮೌನಕ್ಕೆ ಶರಣಾದ ಸಿಎಂ, ವೈದ್ಯರು ಇಂಥದ್ದೊಂದು ಕಾಯಿಲೆ ಬಗ್ಗೆ ನನಗೆ ಹೇಳಿದಾಗ ನಾನು ಹೆದರಲಿಲ್ಲ.
ನನ್ನಲ್ಲಿನ ಇಚ್ಛಾಶಕ್ತಿಯ ಮೂಲಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದೇನೆ. ಆದರೆ ನಾನಿನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಬಜೆಟ್ ಅಧಿವೇಶನದ ಬಳಿಕ ಮತ್ತೆ ಒಂದು ವಾರ ಅಮೆರಿಕಕ್ಕೆ ಚಿಕಿತ್ಸೆಗೆ ತೆರಳಲಿದ್ದೇನೆ ಎಂದು ಹೇಳಿದ್ದಾರೆ.
3 ತಿಂಗಳ ಹಿಂದೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದ ಪರಿಕರ್, ಮುಂಬೈನಲ್ಲಿ ತಪಾಸಣೆಗೆ ಒಳಗಾಗಿದ್ದರು. ಬಳಿಕ ಮಾರ್ಚ್ ಮೊದಲ ವಾರದಲ್ಲಿ ದಿಢೀರನೆ ಅಮೆರಿಕಕ್ಕೆ ಚಿಕಿತ್ಸೆಗಾಗಿ ತೆರಳುವುದಾಗಿ ಘೋಷಿಸಿದ್ದರು.
ಚಿಕಿತ್ಸೆ ಪೂರ್ಣಗೊಂಡು ಇತ್ತೀಚೆಗಷ್ಟೇ ಸ್ವದೇಶಕ್ಕೆ ಮರಳಿದ್ದರು. ಈ ಅವಧಿಯಲ್ಲಿ ಅವರ ಅನಾರೋಗ್ಯದ ಬಗ್ಗೆ ನಾನಾ ಸುದ್ದಿಗಳು ಹಬ್ಬಿದ್ದವಾದರೂ, ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಂದಿರಲಿಲ್ಲ. ಆದರೆ ಮೂಲಗಳ ಪ್ರಕಾರ ಪರಿಕರ್ ಮೇದೋಜೀರಕಾಂಗ ಗ್ರಂಥಿ ಸಂಬಂಧಿ ಕ್ಯಾನ್ಸರ್ಗೆ ತುತ್ತಾಗಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.