ಅನಾರೋಗ್ಯ : ಬದಲಾಗುತ್ತಾರಾ ಮುಖ್ಯಮಂತ್ರಿ?

Published : Sep 24, 2018, 11:03 AM IST
ಅನಾರೋಗ್ಯ : ಬದಲಾಗುತ್ತಾರಾ ಮುಖ್ಯಮಂತ್ರಿ?

ಸಾರಾಂಶ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಹೊಸ ಘೋಷಣೆ ಮಾಡಿದ್ದು, ‘ಮನೋಹರ ಪರ್ರಿಕರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಹೇಳಿದ್ದಾರೆ.

ನವದೆಹಲಿ/ಪಣಜಿ: ಗೋವಾ ಬೃಹನ್ನಾಟಕಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಹೊಸ ಘೋಷಣೆ ಮಾಡಿದ್ದು, ‘ಮನೋಹರ ಪರ್ರಿಕರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ ಇದೇ ವೇಳೆ ಪರ್ರಿಕರ್ ಅವರ ಬಳಿಯ ಖಾತೆಗಳನ್ನು ಬೇರೆಯವರಿಗೆ ವರ್ಗಾಯಿಸುವ ನಿಟ್ಟಿನಲ್ಲಿ ಹಾಗೂ ಪರ್ರಿಕರ್ ಅನುಪಸ್ಥಿತಿಯಲ್ಲಿ ಈ ಹಿಂದೆ ಇದ್ದಂತೆ ಉನ್ನತ ಸಚಿವರ ಸಲಹಾ ಸಮಿತಿ ರಚಿಸುವ ದಿಸೆಯಲ್ಲಿ, ಸಂಪುಟದಲ್ಲಿ ಕೆಲವು ಬದಲಾವಣೆ ಆಗಬಹುದು ಎಂಬ ಮುನ್ಸೂಚನೆಯನ್ನು ಶಾ ನೀಡಿದ್ದಾರೆ.

‘ಪರ‌್ರಿಕರ್ ಅವರೇ ಗೋವಾ ಸರ್ಕಾರದ ನೇತೃತ್ವವನ್ನು ಮುಂದುವರಿಸಲಿದ್ದಾರೆ ಎಂದು ಚರ್ಚೆಯ ಬಳಿಕ ತೀರ್ಮಾನಿಸಲಾಗಿದೆ. ಶೀಘ್ರದಲ್ಲಿ ಸಂಪುಟ ಪುನಾರಚನೆ ಆಗಲಿದ್ದು, ಅವರ ಖಾತೆಗಳು ಕೂಡ ಬದಲಾಗಲಿವೆ’ ಎಂದು ಶಾ ಟ್ವೀಟ್ ಮಾಡಿದ್ದಾರೆ. ಅಸ್ವಸ್ಥ ಪರ್ರಿಕರ್ ಈಗ ದಿಲ್ಲಿಯ ಏಮ್ಸ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ಹಿಂದೆ ಅವರು ಅಮೆರಿಕಕ್ಕೆ ಚಿಕಿತ್ಸೆಗೆಂದು ತೆರಳಿದ್ದಾಗ ಸರ್ಕಾರ ಮುನ್ನಡೆಸಲು ಉನ್ನತ ಸಚಿವರ ಸಲಹಾ ಮಂಡಳಿ ರಚಿಸಲಾಗಿತ್ತು. ಈಗ ಅದೇ ರೀತಿ ಮಂಡಳಿ ರಚಿಸಿ ಖಾತೆ ಮರು ಹಂಚಿಕೆ ಮಾಡುವ ನಿರೀಕ್ಷೆಯಿದೆ. ಪರ್ರಿಕರ್ ಅವರಲ್ಲಿ ಮಾತ್ರ ವಿಶ್ವಾಸ ಇಟ್ಟು ಸರ್ಕಾರಕ್ಕೆ ಬೆಂಬಲ ನೀಡಿರುವುದಾಗಿ ಪ್ರಮುಖ ಮಿತ್ರಪಕ್ಷ ‘ಗೋವಾ ಫಾರ್ವರ್ಡ್’ ಷರತ್ತು ಹಾಕಿದ ಕಾರಣ ಬಿಜೆಪಿ ಈ ತೀರ್ಮಾನಕ್ಕೆ ಬಂದಿದೆ. ಶಾ ಹೇಳಿಕೆಯನ್ನು ಗೋವಾ ಫಾರ್ವರ್ಡ್ ಸ್ವಾಗತಿಸಿದ್ದರೆ, ಕಾಂಗ್ರೆಸ್ ವಿರೋಧಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ