
ಪಣಜಿ[ಫೆ.05]: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಸೋಮವಾರ ಸಂದೇಶವೊಂದನ್ನು ನೀಡಿರುವ ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್, ಮನಸ್ಸಿದ್ದರೆ ಯಾವುದೇ ಕಾಯಿಲೆ ಬೇಕಾದರೂ ಗೆಲ್ಲಬಹುದು ಎಂದು ಟ್ವೀಟ್ ಮಾಡಿದ್ದಾರೆ.
ಹಲವು ತಿಂಗಳುಗಳಿಂದ ಅನಾರೋಗ್ಯಪೀಡಿತರಾಗಿರುವ ಪರ್ರಿಕರ್ ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿಂದಲೇ ಟ್ವೀಟ್ ಮಾಡಿದ್ದಾರೆ. ಈ ನಡುವೆ, ಪರ್ರಿಕರ್ ಅವರಿಗೆ ಆರೋಗ್ಯ ಉತ್ತಮವಾಗಿಲ್ಲ. ದೇವರ ಆಶೀರ್ವಾದದಿಂದ ಅವರು ಬದುಕಿದ್ದಾರೆ. ಅಧಿಕಾರದಿಂದ ಅವರು ಕೆಳಗಿಳಿದರೆ ಅಥವಾ ಅವರಿಗೆ ಏನಾದರೂ ಆದರೆ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗುತ್ತದೆ ಎಂದು ಉಪಸ್ಪೀಕರ್ ಮೈಕಲ್ ಲೋಬೋ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ